<p><strong>ಬೆಂಗಳೂರು:</strong> ರಾಜ್ಯ ಸರ್ಕಾರದ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟು ಶಮನಕ್ಕಾಗಿ ಬೆಂಗಳೂರಿಗೆ ಬರುತ್ತಿರುವ ಪಕ್ಷದ ರಾಜ್ಯ ಉಸ್ತುವಾರಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಇದೇ 16ರಂದು ಸಚಿವರ ಸಭೆ ಕರೆದಿದ್ದಾರೆ.</p>.<p>ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆಗೆ ಪಟ್ಟು ಹಿಡಿದಿರುವ ಒಂದು ಗುಂಪು ನಿರಂತರವಾಗಿ ಬಿಜೆಪಿ ವರಿಷ್ಠರ ಮನವೊಲಿಕೆಗೆ ಪ್ರಯತ್ನಿಸುತ್ತಿದೆ. ಸಚಿವ ಸಿ.ಪಿ. ಯೋಗೇಶ್ವರ್ ಸೇರಿದಂತೆ ಹಲವರು ಮತ್ತೆ ಈ ಬೇಡಿಕೆಯನ್ನು ಪಕ್ಷದ ವರಿಷ್ಠರ ಮುಂದೆ ಇಟ್ಟಿದ್ದಾರೆ ಎಂದೂ ಹೇಳಲಾಗುತ್ತಿದೆ.</p>.<p>ಯಡಿಯೂರಪ್ಪ ಮತ್ತು ಅವರ ಮಗ ಬಿ.ವೈ. ವಿಜಯೇಂದ್ರ ನಡೆಯ ಬಗ್ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಕರಾರು ತೆಗೆಯುತ್ತಲೇ ಇದ್ದಾರೆ. ಶಾಸಕಾಂಗ ಪಕ್ಷದ ಸಭೆ ನಡೆಸಿ ಶಾಸಕರ ಅಭಿಪ್ರಾಯ ಆಲಿಸಬೇಕೆಂಬ ಬೇಡಿಕೆಯೂ ಪ್ರಬಲವಾಗುತ್ತಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ ಅರುಣ್ ಸಿಂಗ್ ರಾಜ್ಯಕ್ಕೆ ಬರುತ್ತಿದ್ದಾರೆ.</p>.<p>‘ಇದೇ 16ರಿಂದ ಮೂರು ದಿನಗಳ ಕಾಲ ಅರುಣ್ ಸಿಂಗ್ ರಾಜ್ಯದಲ್ಲಿ ಇರುತ್ತಾರೆ. ಮೊದಲ ದಿನವೇ ಸಚಿವರ ಸಭೆ ಕರೆದಿದ್ದಾರೆ. ಮಲ್ಲೇಶ್ವರದಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಸಭೆಗೆ ಕಡ್ಡಾಯವಾಗಿ ಹಾಜರಾಗುವಂತೆ ಎಲ್ಲ ಸಚಿವರಿಗೂ ಸೂಚಿಸಲಾಗಿದೆ’ ಎಂದು ಪಕ್ಷದ ಮೂಲಗಳು ತಿಳಿಸಿವೆ.</p>.<p>ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಅರುಣ್ ಸಿಂಗ್, ಸಚಿವರ ಜತೆ ಚರ್ಚಿಸಿ, ಅಭಿಪ್ರಾಯ ಸಂಗ್ರಹಿಸುವ ಸಾಧ್ಯತೆ ಇದೆ. ಕೋವಿಡ್ ನಿಯಂತ್ರಣ, ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಜಾರಿಗೊಳಿಸಿರುವ ಯೋಜನೆಗಳ ಕುರಿತು ಮಾಹಿತಿ ಸಂಗ್ರಹಿಸುವುದಕ್ಕೂ ಮುಂದಾಗಿದ್ದಾರೆ ಎಂದು ಗೊತ್ತಾಗಿದೆ.</p>.<p><strong>ಶಾಸಕರ ಸಭೆಗೂ ಸಿದ್ಧತೆ: </strong>ಪಕ್ಷದಲ್ಲಿನ ಬೆಳವಣಿಗೆಗಳು, ರಾಜ್ಯ ಸರ್ಕಾರದಲ್ಲಿ ಅನುದಾನ ಹಂಚಿಕೆಯಲ್ಲಿನ ತಾರತಮ್ಯ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚಿಸಲು ಶಾಸಕಾಂಗ ಪಕ್ಷದ ಸಭೆ ನಡೆಸಬೇಕೆಂಬ ಆಗ್ರಹ ಹಲವು ದಿನಗಳಿಂದಲೂ ಇದೆ. ವಿಧಾನಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಸಚೇತಕರಾಗಿರುವ ವಿ. ಸುನಿಲ್ ಕುಮಾರ್ ಪದೇ ಪದೇ ಈ ಬೇಡಿಕೆಯನ್ನು ಮಂಡಿಸುತ್ತಿದ್ದಾರೆ.</p>.<p>ಅರುಣ್ ಸಿಂಗ್ ಭೇಟಿಯ ಸಂದರ್ಭದಲ್ಲೇ ಶಾಸಕಾಂಗ ಪಕ್ಷದ ಸಭೆಯನ್ನೂ ನಡೆಸುವ ಸಾಧ್ಯತೆ ಇದೆ. ಅದು ಸಾಧ್ಯವಾಗದೇ ಇದ್ದರೆ ಪಕ್ಷದ ಕಚೇರಿಯಲ್ಲಿ ಎಲ್ಲ ಶಾಸಕರ ಸಭೆ ನಡೆಸಲು ಸಿದ್ಧತೆ ನಡೆದಿದೆ. ಸಚಿವರ ಜತೆಗಿನ ಸಭೆಯ ಬಳಿಕ ಅರುಣ್ ಸಿಂಗ್ ಈ ಕುರಿತು ನಿರ್ಧಾರಕ್ಕೆ ಬರಲಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ಸರ್ಕಾರದ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟು ಶಮನಕ್ಕಾಗಿ ಬೆಂಗಳೂರಿಗೆ ಬರುತ್ತಿರುವ ಪಕ್ಷದ ರಾಜ್ಯ ಉಸ್ತುವಾರಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಇದೇ 16ರಂದು ಸಚಿವರ ಸಭೆ ಕರೆದಿದ್ದಾರೆ.</p>.<p>ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆಗೆ ಪಟ್ಟು ಹಿಡಿದಿರುವ ಒಂದು ಗುಂಪು ನಿರಂತರವಾಗಿ ಬಿಜೆಪಿ ವರಿಷ್ಠರ ಮನವೊಲಿಕೆಗೆ ಪ್ರಯತ್ನಿಸುತ್ತಿದೆ. ಸಚಿವ ಸಿ.ಪಿ. ಯೋಗೇಶ್ವರ್ ಸೇರಿದಂತೆ ಹಲವರು ಮತ್ತೆ ಈ ಬೇಡಿಕೆಯನ್ನು ಪಕ್ಷದ ವರಿಷ್ಠರ ಮುಂದೆ ಇಟ್ಟಿದ್ದಾರೆ ಎಂದೂ ಹೇಳಲಾಗುತ್ತಿದೆ.</p>.<p>ಯಡಿಯೂರಪ್ಪ ಮತ್ತು ಅವರ ಮಗ ಬಿ.ವೈ. ವಿಜಯೇಂದ್ರ ನಡೆಯ ಬಗ್ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಕರಾರು ತೆಗೆಯುತ್ತಲೇ ಇದ್ದಾರೆ. ಶಾಸಕಾಂಗ ಪಕ್ಷದ ಸಭೆ ನಡೆಸಿ ಶಾಸಕರ ಅಭಿಪ್ರಾಯ ಆಲಿಸಬೇಕೆಂಬ ಬೇಡಿಕೆಯೂ ಪ್ರಬಲವಾಗುತ್ತಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ ಅರುಣ್ ಸಿಂಗ್ ರಾಜ್ಯಕ್ಕೆ ಬರುತ್ತಿದ್ದಾರೆ.</p>.<p>‘ಇದೇ 16ರಿಂದ ಮೂರು ದಿನಗಳ ಕಾಲ ಅರುಣ್ ಸಿಂಗ್ ರಾಜ್ಯದಲ್ಲಿ ಇರುತ್ತಾರೆ. ಮೊದಲ ದಿನವೇ ಸಚಿವರ ಸಭೆ ಕರೆದಿದ್ದಾರೆ. ಮಲ್ಲೇಶ್ವರದಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಸಭೆಗೆ ಕಡ್ಡಾಯವಾಗಿ ಹಾಜರಾಗುವಂತೆ ಎಲ್ಲ ಸಚಿವರಿಗೂ ಸೂಚಿಸಲಾಗಿದೆ’ ಎಂದು ಪಕ್ಷದ ಮೂಲಗಳು ತಿಳಿಸಿವೆ.</p>.<p>ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಅರುಣ್ ಸಿಂಗ್, ಸಚಿವರ ಜತೆ ಚರ್ಚಿಸಿ, ಅಭಿಪ್ರಾಯ ಸಂಗ್ರಹಿಸುವ ಸಾಧ್ಯತೆ ಇದೆ. ಕೋವಿಡ್ ನಿಯಂತ್ರಣ, ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಜಾರಿಗೊಳಿಸಿರುವ ಯೋಜನೆಗಳ ಕುರಿತು ಮಾಹಿತಿ ಸಂಗ್ರಹಿಸುವುದಕ್ಕೂ ಮುಂದಾಗಿದ್ದಾರೆ ಎಂದು ಗೊತ್ತಾಗಿದೆ.</p>.<p><strong>ಶಾಸಕರ ಸಭೆಗೂ ಸಿದ್ಧತೆ: </strong>ಪಕ್ಷದಲ್ಲಿನ ಬೆಳವಣಿಗೆಗಳು, ರಾಜ್ಯ ಸರ್ಕಾರದಲ್ಲಿ ಅನುದಾನ ಹಂಚಿಕೆಯಲ್ಲಿನ ತಾರತಮ್ಯ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚಿಸಲು ಶಾಸಕಾಂಗ ಪಕ್ಷದ ಸಭೆ ನಡೆಸಬೇಕೆಂಬ ಆಗ್ರಹ ಹಲವು ದಿನಗಳಿಂದಲೂ ಇದೆ. ವಿಧಾನಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಸಚೇತಕರಾಗಿರುವ ವಿ. ಸುನಿಲ್ ಕುಮಾರ್ ಪದೇ ಪದೇ ಈ ಬೇಡಿಕೆಯನ್ನು ಮಂಡಿಸುತ್ತಿದ್ದಾರೆ.</p>.<p>ಅರುಣ್ ಸಿಂಗ್ ಭೇಟಿಯ ಸಂದರ್ಭದಲ್ಲೇ ಶಾಸಕಾಂಗ ಪಕ್ಷದ ಸಭೆಯನ್ನೂ ನಡೆಸುವ ಸಾಧ್ಯತೆ ಇದೆ. ಅದು ಸಾಧ್ಯವಾಗದೇ ಇದ್ದರೆ ಪಕ್ಷದ ಕಚೇರಿಯಲ್ಲಿ ಎಲ್ಲ ಶಾಸಕರ ಸಭೆ ನಡೆಸಲು ಸಿದ್ಧತೆ ನಡೆದಿದೆ. ಸಚಿವರ ಜತೆಗಿನ ಸಭೆಯ ಬಳಿಕ ಅರುಣ್ ಸಿಂಗ್ ಈ ಕುರಿತು ನಿರ್ಧಾರಕ್ಕೆ ಬರಲಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>