ನವದೆಹಲಿ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ನೀಡಲಿದ್ದಾರೆಯೇ?’, ‘ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ?’ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡದ ಅವರು, ‘ಮುಂದಿನ ವಾರ ಭೇಟಿ ಮಾಡೋಣ’ ಎಂದಷ್ಟೇ ಹೇಳಿ ತಮ್ಮ ನಿವಾಸದಿಂದ ಹೊರಟು ಹೋದರು.
ಗುರುವಾರ ಬೆಳಿಗ್ಗೆ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರನ್ನು ತಮ್ಮ ನಿವಾಸದಲ್ಲಿ ಭೇಟಿ ಮಾಡಿ ಸ್ವಲ್ಪ ಹೊತ್ತು ಚರ್ಚಿಸಿದ ಬಳಿಕ ಬಿಜೆಪಿ ಕೇಂದ್ರ ಕಚೇರಿಯತ್ತ ತೆರಳಿದ ಅರುಣ್ ಸಿಂಗ್ ಮೌನ ಮುರಿಯದೇ ಸಾಗಿದರು.