ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಕೆಇಎ ದೂರು ನೀಡಿದೆ. ಆ ಪ್ರಕರಣದಲ್ಲಿ ಹೆಸರಿರುವ ಕುಲಸಚಿವರು ಯಾರ ಮನೆಗೆ ಎಷ್ಟು ಬಾರಿ ಹೋಗಿದ್ದಾರೆ, ಅವರ ಮತ್ತು ಸಚಿವರ ಒಡನಾಟ ಏನು, ಅವರ ನೇತೃತ್ವದ ಸಂಸ್ಥೆಗಳಲ್ಲಿ ಯಾವ ರೀತಿ ಅಕ್ರಮ ನಡೆಯುತ್ತಿದೆ, ಅಲ್ಲೆಲ್ಲ ವಿಶ್ವದ ನಂಟಿದೆ ಎಂದು ಅವರೇ ಹೇಳುವುದಾದರೆ ಎಲ್ಲ ಭ್ರಷ್ಟಾಚಾರಗಳಿಗೆ ವಿಶ್ವಮಾನವ ಅವರೇ ಅಲ್ಲವೇ’ ಎಂದು ಪ್ರಶ್ನಿಸಿದರು.