ಗೃಹ ಸಚಿವರಿಗೆ ಭಾನುವಾರ ಪತ್ರ ಬರೆದಿರುವ ಅವರು, ‘ಪುನೀತ್ ಅವರ ಅಕಾಲಿಕ ಅಗಲಿಕೆಯಿಂದ ನಮಗಷ್ಟೇ ಅಲ್ಲ, ಇಡೀ ರಾಜ್ಯಕ್ಕೆ ಆಘಾತ ಉಂಟುಮಾಡಿತ್ತು. ಜಗತ್ತಿನಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಪುನೀತ್ ಅವರನ್ನು ನಮ್ಮ ನೋವನ್ನು ಅಡಗಿಸಿಟ್ಟುಕೊಂಡು ಸಕಲ ಗೌರವಗಳೊಂದಿಗೆ ಕಳುಹಿಸಿಕೊಡುವುದು ಅನಿವಾರ್ಯವಾಗಿತ್ತು. ಈ ಸಂದರ್ಭದಲ್ಲಿ ನೀವು ನಮಗೆ ಬೆಂಬಲವಾಗಿ ನಿಂತಿದ್ದಿರಿ’ ಎಂದು ಹೇಳಿದ್ದಾರೆ.