‘ಪ್ರತೀ ಶಾಸಕರು ಮೂರು ಶಾಲೆಗಳನ್ನು ದತ್ತು ಪಡೆದು, ಅಭಿವೃದ್ಧಿಪಡಿಸಲು 2020–21ರ ಬಜೆಟ್ನಲ್ಲಿ ಅನುದಾನ ಒದಗಿಸಲಾಗಿತ್ತು. ಕೆಲವು ಶಾಸಕರು ಮೂರಕ್ಕಿಂತ ಹೆಚ್ಚು ಶಾಲೆಗಳನ್ನು ಅಭಿವೃದ್ಧಿಪಡಿಸಿದ್ದಾರೆ. ಆದರೆ, ಹೆಚ್ಚಿನ ಶಾಸಕರು ಶಾಲೆಗಳನ್ನು ದತ್ತು ಪಡೆದಿಲ್ಲ. ಈ ಕುರಿತ ನನ್ನ ಮನವಿಗಳಿಗೂ ಸ್ಪಂದಿಸಿಲ್ಲ. ಈಗಲೂ ಕಾಲ ಮಿಂಚಿಲ್ಲ. ಶಾಸಕರು ಸಂಪರ್ಕಕ್ಕೆ ಬಂದಾಗ ಮತದಾರರು ಪ್ರಶ್ನಿಸಬೇಕು’ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.