ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಳೆಯ ದ್ವೇಷ: ಶಿವಮೊಗ್ಗದಲ್ಲಿ ಯುವಕನ ಮೇಲೆ ಹಲ್ಲೆ, ಮೂವರ ಬಂಧನ

Last Updated 26 ಅಕ್ಟೋಬರ್ 2022, 5:07 IST
ಅಕ್ಷರ ಗಾತ್ರ

ಶಿವಮೊಗ್ಗ: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಇಲ್ಲಿನ ಭರಮಪ್ಪ ನಗರದಲ್ಲಿ ಗುಂಪೊಂದು ಸೋಮವಾರ ತಡರಾತ್ರಿ ಪ್ರಕಾಶ್‌ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದೆ. ಇದರಿಂದ ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಪ್ರಕರಣದ ಸಂಬಂಧ ಮಾರ್ಕೆಟ್ ಫೌಜಾನ್, ಅಜರ್ ಹಾಗೂ ಫರಾಜ್ ಎಂಬುವವರನ್ನು ಮಂಗಳವಾರ ಬಂಧಿಸಲಾಗಿದೆ’ ಎಂದು ಎಸ್‌ಪಿ ಜಿ.ಕೆ.ಮಿಥುನ್‌ಕುಮಾರ್ ತಿಳಿಸಿದ್ದಾರೆ.

ಬಿಗಿ ಭದ್ರತೆ: ಹಲ್ಲೆ ಘಟನೆ ಹಿನ್ನೆಲೆಯಲ್ಲಿ ಮುಂಜಾಗ್ರತೆಯಾಗಿ ಹಳೆಯ ಶಿವಮೊಗ್ಗ ಭಾಗದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

ಹರ್ಷನ ಕುಟುಂಬಕ್ಕೆ ಬೆದರಿಕೆ?:ಹತ್ಯೆಯಾಗಿದ್ದ ಬಜರಂಗದಳದ ಕಾರ್ಯಕರ್ತ ಹರ್ಷನ ಕುಟುಂಬದವರಿಗೆ ಗುಂಪೊಂದು ಜೀವಬೆದರಿಕೆ ಹಾಕಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾಧ್ಯಮದವರ ಎದುರು ಅಳಲು ತೋಡಿಕೊಂಡಿದ್ದ ಹರ್ಷನ ಸಹೋದರಿ ಅಶ್ವಿನಿ, ‘ಕೇಂದ್ರ ಹಾಗೂ ರಾಜ್ಯ ಎರಡೂ ಕಡೆ ಬಿಜೆಪಿ ಸರ್ಕಾರವಿದ್ದರೂ ನಮ್ಮ ಜೀವಕ್ಕೆ ಬೆಲೆ ಇಲ್ಲವಾಗಿದೆ’ ಎಂದಿದ್ದರು. ಆದರೆ ಈ ಬಗ್ಗೆ ಯಾವುದೇ ದೂರು ದಾಖಲಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT