ಶಿವಮೊಗ್ಗ: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಇಲ್ಲಿನ ಭರಮಪ್ಪ ನಗರದಲ್ಲಿ ಗುಂಪೊಂದು ಸೋಮವಾರ ತಡರಾತ್ರಿ ಪ್ರಕಾಶ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದೆ. ಇದರಿಂದ ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಪ್ರಕರಣದ ಸಂಬಂಧ ಮಾರ್ಕೆಟ್ ಫೌಜಾನ್, ಅಜರ್ ಹಾಗೂ ಫರಾಜ್ ಎಂಬುವವರನ್ನು ಮಂಗಳವಾರ ಬಂಧಿಸಲಾಗಿದೆ’ ಎಂದು ಎಸ್ಪಿ ಜಿ.ಕೆ.ಮಿಥುನ್ಕುಮಾರ್ ತಿಳಿಸಿದ್ದಾರೆ.
ಬಿಗಿ ಭದ್ರತೆ: ಹಲ್ಲೆ ಘಟನೆ ಹಿನ್ನೆಲೆಯಲ್ಲಿ ಮುಂಜಾಗ್ರತೆಯಾಗಿ ಹಳೆಯ ಶಿವಮೊಗ್ಗ ಭಾಗದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ಹರ್ಷನ ಕುಟುಂಬಕ್ಕೆ ಬೆದರಿಕೆ?:ಹತ್ಯೆಯಾಗಿದ್ದ ಬಜರಂಗದಳದ ಕಾರ್ಯಕರ್ತ ಹರ್ಷನ ಕುಟುಂಬದವರಿಗೆ ಗುಂಪೊಂದು ಜೀವಬೆದರಿಕೆ ಹಾಕಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಾಧ್ಯಮದವರ ಎದುರು ಅಳಲು ತೋಡಿಕೊಂಡಿದ್ದ ಹರ್ಷನ ಸಹೋದರಿ ಅಶ್ವಿನಿ, ‘ಕೇಂದ್ರ ಹಾಗೂ ರಾಜ್ಯ ಎರಡೂ ಕಡೆ ಬಿಜೆಪಿ ಸರ್ಕಾರವಿದ್ದರೂ ನಮ್ಮ ಜೀವಕ್ಕೆ ಬೆಲೆ ಇಲ್ಲವಾಗಿದೆ’ ಎಂದಿದ್ದರು. ಆದರೆ ಈ ಬಗ್ಗೆ ಯಾವುದೇ ದೂರು ದಾಖಲಿಸಿಲ್ಲ.
Two small incidents happened in Shivamogga to disturb the peace. Shivamogga police have taken 3 people already in custody, they'll do what needs to be done. We've info about some people trying to disturb the peace; police will take action: Karnataka Home Minister Araga Jnanendra https://t.co/BHvz1IS9BMpic.twitter.com/VkbAZvsT83