ಶಿವಮೊಗ್ಗ: ಸಾಗರ ತಾಲ್ಲೂಕಿನ ಶರಾವತಿ ಹಿನ್ನೀರಿನಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸಿಗಂದೂರು ದೇವಸ್ಥಾನದ ಆಂತರಿಕ ವಿವಾದ ತಾರಕ್ಕೇರುತ್ತಿದ್ದಂತೆಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಘಟನೆಯ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದೆ.
ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ಅವರು ಧರ್ಮದರ್ಶಿ ರಾಮಪ್ಪ, ಪ್ರಧಾನ ಅರ್ಚಕ ಶೇಷಗಿರಿ ಭಟ್ಟರನ್ನು ಹಲವು ತಾಸು ವಿಚಾರಣೆಗೆ ಒಳಪಡಿಸಿದರು. ದೇವಸ್ಥಾನದ ಆದಾಯ, ಆರ್ಥಿಕ ಸ್ಥಿತಿಗತಿಗಳ ಮಾಹಿತಿ ಪಡೆದರು.
ದೇವಸ್ಥಾನದ ಪ್ರಧಾನ ಅರ್ಚಕ ಹಾಗೂ ಧರ್ಮದರ್ಶಿ ಮಧ್ಯೆ ಹಲವು ದಿನಗಳಿಂದ ಸಂಘರ್ಷವಿತ್ತು. ಶುಕ್ರವಾರ ಅರ್ಚಕರ ಸಹೋದರ ಸುಬ್ರಾಯ ಭಟ್ ಸ್ಥಳೀಯರೊಬ್ಬರ ಮೇಲೆ ಹಲ್ಲೆ ನಡೆಸಿದ್ದರು. ದೇವಸ್ಥಾನದ ಆವರಣದಲ್ಲಿ ಚಂಡಿಕಾ ಹೋಮ ನಡೆಸಲು ಆಡಳಿತ ಮಂಡಳಿ ಅವಕಾಶ ನೀಡಲಿಲ್ಲ ಎಂದುಅರ್ಚಕರಕುಟುಂಬಮೌನ ವ್ರತ ಕೈಗೊಂಡಿತ್ತು. ನಂತರ ಪೂಜೆಗೆ ಬಂದಿದ್ದ ದ್ಯಾವಪ್ಪ ಗೌಡ,ದೇವಸ್ಥಾನದ ಸಿಬ್ಬಂದಿ ಮಹೇಶ್,ವಿಮಲಾಅವರ ಮೇಲೆಹಲ್ಲೆ ನಡೆಸಿದ್ದರು.ದೇವಸ್ಥಾನದ ಕಚೇರಿಯ ಕಿಟಕಿಗಾಜುಒಡೆದಿದ್ದರು.
ಪ್ರತಿಭಟನೆ: ಅರ್ಚಕರ ಸಹೋದರನ ವಿರುದ್ಧದೇವಸ್ಥಾನದ ವ್ಯವಸ್ಥಾಪಕ ಪ್ರಕಾಶ ದೂರು ನೀಡಿದ್ದಾರೆ.ಹಲ್ಲೆ ನಡೆಸಿದ ಸಾಕ್ಷ್ಯಗಳಿದ್ದರೂ ಪೊಲೀಸರು ಪ್ರಕರಣ ದಾಖಲಿಸಿಲ್ಲ ಎಂದು ಆರೋಪಿಸಿ ಈಡಿಗ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದರು.
‘ದೇವಸ್ಥಾನಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಾಗಿದೆ. ಅಲ್ಲಿನ ಆಸ್ತಿ, ಹಣಕಾಸು ವ್ಯವಹಾರ ಕುರಿತು ಸರ್ಕಾರಕ್ಕೆ ವರದಿ ನೀಡುತ್ತೇನೆ’ ಎಂದು ಜಿಲ್ಲಾಧಿಕಾರಿ ಶಿವಕುಮಾರ್ ಮಾಹಿತಿ ನೀಡಿದರು.