<p><strong>ಬೆಂಗಳೂರು</strong>: ನಗರದಲ್ಲಿನ ಕೆರೆಗಳ ಒತ್ತುವರಿ ವಿಷಯ ವಿಧಾನಸಭೆಯಲ್ಲಿ ಸೋಮವಾರ ಕೋಲಾಹಲಕ್ಕೆ ಕಾರಣವಾಯಿತು. ‘ಬೆಂಗಳೂರಿನ ಕೆರೆಗಳನ್ನು ಮುಚ್ಚಿದ್ದು ಯಾರು’ ಎಂಬ ಪ್ರಶ್ನೆಯನ್ನೇ ಮುಂದಿಟ್ಟುಕೊಂಡು ಆಡಳಿತಾರೂಢ ಬಿಜೆಪಿ ಮತ್ತು ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ತೀವ್ರ ವಾಕ್ಸಮರ ನಡೆಸಿದರು.</p>.<p>ಅತಿವೃಷ್ಟಿ ಮತ್ತು ಪ್ರವಾಹದ ಕುರಿತು ನಡೆದ ಚರ್ಚೆಗೆ ಉತ್ತರ ನೀಡಿದ ಕಂದಾಯ ಸಚಿವ ಆರ್. ಅಶೋಕ ಕೆರೆ ಒತ್ತುವರಿ ಬಗ್ಗೆ ಪ್ರಸ್ತಾಪಿಸಿದರು. ‘ಬೆಂಗಳೂರಿನಲ್ಲಿ ಈ ಬಾರಿ ಮಾತ್ರ ಪ್ರವಾಹ ಬಂದಿಲ್ಲ. ಹಿಂದೆಯೂ ಹಲವು ಬಾರಿ ಇದೇ ಸಮಸ್ಯೆ ಆಗಿತ್ತು. ಇದು ಮಾನವ ನಿರ್ಮಿತ ಸಮಸ್ಯೆ. ಹಿಂದೆ ಆಡಳಿತ ನಡೆಸಿದವರಿಗೆ ದೂರದೃಷ್ಟಿ ಇದ್ದಿದ್ದರೆ ಈ ಸಮಸ್ಯೆ ಆಗುತ್ತಿರಲಿಲ್ಲ’ ಎಂದರು.</p>.<p>ಆಗ ಮಧ್ಯ ಪ್ರವೇಶಿಸಿದ ಕಾಂಗ್ರೆಸ್ನ ಕೆ.ಜೆ. ಜಾರ್ಜ್, ‘ನಾನು ಕೆರೆ ಕಬಳಿಸಿದ್ದೇನೆ ಎಂದು ನಿಮ್ಮ ಪಕ್ಷದವರು ಟ್ರೋಲ್ ಮಾಡುತ್ತಿದ್ದಾರೆ. ನನ್ನ ಕಾಲದಲ್ಲಿ ಯಾವ ಕೆರೆ ಮುಚ್ಚಿದ್ದೇನೆ ತೋರಿಸಿ? ನಾನು ಕಾನೂನುಬಾಹಿರ ಕೆಲಸ ಮಾಡಿದ್ದರೆ ಕ್ರಮ ಜರುಗಿಸಿ’ ಎಂದು ಸವಾಲು ಹಾಕಿದರು.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, ‘ಯಾರು ಕೆರೆ ಕಬಳಿಸಿದ್ದಾರೆ ಎಂಬುದರ ತನಿಖೆ ಮಾಡಲಾಗುವುದು. ಕೆರೆಗಳ ಜಮೀನು ಮತ್ತು ನಿರ್ಬಂಧಿತ ವಲಯದಲ್ಲಿ (ಬಫರ್ ಝೋನ್) ಅತಿಕ್ರಮಣ, ಕಟ್ಟಡ ನಿರ್ಮಾಣ ನಿಷೇಧಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ 2007ರಲ್ಲಿ ಆದೇಶ ಹೊರಡಿಸಿತ್ತು. ಆ ಬಳಿಕವೂ ಹಲವು ಕೆರೆಗಳ ಅತಿಕ್ರಮಣ ನಡೆದಿದೆ. ಇದಕ್ಕೆ ಹೊಣೆ ಯಾರು ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗುವುದು. ಕೆರೆಗಳ ಕಣ್ಮರೆಗೆ ಕಾರಣವಾಗಿರುವವರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ಹೇಳಿದರು.</p>.<p><strong>ಕೆರೆ ಸ್ವರೂಪ ಅಳಿಸಲು ಯತ್ನ:</strong> ‘ಮೂಲ ಸ್ವರೂಪ ಕಳೆದುಕೊಂಡ ಕೆರೆಗಳನ್ನು ದಾಖಲೆಗಳಿಂದ ಅಳಿಸಿ ಹಾಕುವ ಪ್ರಯತ್ನ 2018ರಲ್ಲಿ ನಡೆದಿತ್ತು. ಭೂ ಕಂದಾಯ ಕಾಯ್ದೆಯ ಸೆಕ್ಷನ್–68ರ ಅಡಿಯಲ್ಲಿ ಆ ರೀತಿಯ ತೀರ್ಮಾನ ಕೈಗೊಳ್ಳಲು ಅವಕಾಶ ಇಲ್ಲ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅಭಿಪ್ರಾಯ ನೀಡಿದ್ದರು. ಅದನ್ನು ಬದಿಗೊತ್ತಿ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು. ಜನರಿಂದ ವಿರೋಧ ವ್ಯಕ್ತವಾದ ಕಾರಣದಿಂದ ಸರ್ಕಾರ ಆ ತೀರ್ಮಾನವನ್ನು ಅನು ಷ್ಠಾನಕ್ಕೆ ತಂದಿರಲಿಲ್ಲ’ ಎಂದು ಮುಖ್ಯಮಂತ್ರಿ ಹೇಳಿದರು.</p>.<p><strong>ಅಲ್ಲಗಳೆದ ಸಿದ್ದರಾಮಯ್ಯ: ‘</strong>ನಮ್ಮ ಅವಧಿಯಲ್ಲಿ ಆ ರೀತಿಯ ತೀರ್ಮಾನ ಕೈಗೊಂಡಿರಲಿಲ್ಲ. ಮೂಲ ಸ್ವರೂಪ ಕಳೆದುಕೊಂಡ ಕೆರೆಗಳನ್ನು ಪಟ್ಟಿಯಿಂದ ಕೈಬಿಡುವ ನಿರ್ಧಾರ ಮಾಡಿದ್ದೆವು. ಆದರೆ, ಅದನ್ನು ಅನುಷ್ಠಾನಕ್ಕೆ ತರಲಿಲ್ಲ’ ಎಂದು ಸಿದ್ದರಾಮಯ್ಯ ಹೇಳಿದರು.</p>.<p>ಬೆಂಬಲಕ್ಕೆ ನಿಂತ ಜಾರ್ಜ್, ‘ಆಗ ಕಂದಾಯ ಸಚಿವರಾಗಿದ್ದ ಕಾಗೋಡು ತಿಮ್ಮಪ್ಪ ಕ್ಷೇತ್ರದಲ್ಲಿ ಉಂಟಾದ ಸಮಸ್ಯೆ ಕಾರಣದಿಂದ ಈ ಪ್ರಸ್ತಾವ ಸಂಪುಟದ ಮುಂದೆ ಬಂದಿತ್ತು’ ಎಂದರು.</p>.<p>‘ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಏಕೆ ಮುಟ್ಟಿಕೊಳ್ಳುತ್ತೀರಿ? ಕೆರೆಗಳನ್ನು ನುಂಗುವುದೇ ನಿಮ್ಮ ಉದ್ದೇಶವಾಗಿತ್ತು ಎಂಬುದು ಸಾಬೀತಾಗಿದೆ’ ಎಂದು ಬೊಮ್ಮಾಯಿ ಏರಿದ ಧ್ವನಿಯಲ್ಲಿ ಹೇಳಿದರು.</p>.<p>‘ಹಳೆಯ ವಿಷಯ ಪ್ರಸ್ತಾಪಿಸಿ ದಿಕ್ಕು ತಪ್ಪಿಸಬೇಡಿ. ಸುಭಾಶ್ ನಗರದ ಕೆರೆಯಲ್ಲಿ ಬಸ್ ನಿಲ್ದಾಣವಿದೆ. ಅದನ್ನು ಮತ್ತೆ ಕೆರೆಯನ್ನಾಗಿ ಮಾಡಲು ಸಾಧ್ಯವೆ’ ಎಂದು ಸಿದ್ದರಾಮಯ್ಯ ಕೇಳಿದರು.</p>.<p>ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ವಾಕ್ಸಮರಕ್ಕೆ ಇಳಿದರು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಲಾಪವನ್ನು ಮಧ್ಯಾಹ್ನದ ಭೋಜನ ವಿರಾಮಕ್ಕೆ ಮುಂದೂಡಿದರು.</p>.<p><strong>‘ಸೊಳ್ಳೆ ಕಾಟಕ್ಕೆ ಕೆರೆ ಮುಚ್ಚಿದ್ದರಂತೆ’</strong><br />‘ಸೊಳ್ಳೆ ಕಾಟದ ಕಾರಣಕ್ಕಾಗಿ ಕೆರೆಗಳನ್ನು ಮುಚ್ಚಿರಬಹುದು’ ಎಂದು ಕಾಂಗ್ರೆಸ್ ಶಾಸಕ ಕೆ.ಜೆ. ಜಾರ್ಜ್ ವಿಧಾನಸಭೆಯಲ್ಲೇ ಹೇಳಿದ್ದರು. ಈ ವಿಷಯವನ್ನು ಮುಂದಿಟ್ಟುಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಅವರನ್ನು ‘ಟ್ರೋಲ್’ ಮಾಡಲಾಗುತ್ತಿದೆ. ಸೋಮವಾರ ಸದನದಲ್ಲಿ ಈ ಕುರಿತು ಪ್ರಸ್ತಾಪಿಸಿದ ಅವರು, ತೀವ್ರ ಬೇಸರ ವ್ಯಕ್ತಪಡಿಸಿದರು.</p>.<p><strong>42 ಕೆರೆಗಳ ಪಟ್ಟಿ ನೀಡಿದ ಅಶೋಕ</strong><br />ನಗರದಲ್ಲಿ 1977ರಿಂದ ಈವರೆಗೆ 42 ಕೆರೆಗಳು ಒತ್ತುವರಿಯಾಗಿವೆ ಎಂದು ಕಂದಾಯ ಸಚಿವ ಆರ್. ಅಶೋಕ ಸದನದಲ್ಲೇ ಪಟ್ಟಿ ಓದಿದರು.</p>.<p>ಬಿಡಿಎ 22 ಕೆರೆಗಳನ್ನು ಒತ್ತುವರಿ ಮಾಡಿದೆ. ಬಿಡಿಎ ಅನುಮೋದಿತ ಬಡಾವಣೆಯಲ್ಲಿ ಒಂದು ಕೆರೆ ಮುಚ್ಚಲಾಗಿದೆ. ಬಿಬಿಎಂಪಿ ಐದು ಕೆರೆಗಳನ್ನು ಮುಚ್ಚಿದೆ. ಖಾಸಗಿ ಒತ್ತುವರಿದಾರರು ಏಳು ಕೆರೆಗಳನ್ನು ಅತಿಕ್ರಮಣ ಮಾಡಿದ್ದಾರೆ. ಬಿಡಿಎ ಕೆರೆಗಳನ್ನು ಮುಚ್ಚಿ ನಿರ್ಮಿಸಿದ ಬಡಾವಣೆಗಳಲ್ಲಿ ಅಂದಾಜು ₹ 11,640 ಕೋಟಿ ಮೌಲ್ಯದ ನಿವೇಶನಗಳನ್ನು ಮಾರಾಟ ಮಾಡಿದೆ ಎಂದರು.</p>.<p><strong>‘ಶಕ್ತಿಯುತವಾದಷ್ಟೂ ವಿರೋಧಿಗಳು ಹೆಚ್ಚು’</strong><br />‘ನಾವು ಶಕ್ತಿಯುತವಾದಷ್ಟೂ ವಿರೋಧಿಗಳು ಹೆಚ್ಚು. ದುರ್ಬಲವಾದಷ್ಟೂ ವಿರೋಧಿಗಳು ಕಡಿಮೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.</p>.<p>ಕೆರೆಗಳನ್ನು ಮುಚ್ಚಿರುವ ಕುರಿತ ಚರ್ಚೆಯ ವೇಳೆ, ‘ಸಿದ್ದರಾಮಯ್ಯ ಮತ್ತು ಜಾರ್ಜ್ ಅವರೇ ನಿಮ್ಮ ಕಾಲದಲ್ಲಿ ಆಗಿಲ್ಲ ಬಿಡಿ. ನಿಮಗೆ ವಿರೋಧಿಗಳು ಹೆಚ್ಚು. ನೀವು ಹಾಗೆ ಮಾಡುವುದಕ್ಕೂ ಆಗುತ್ತಿರಲಿಲ್ಲ’ ಎಂದು ಅಶೋಕ ತಮಾಶೆ ಮಾಡಿದರು.</p>.<p>ಆಗ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ಶಕ್ತಿಯುತವಾದಷ್ಟೂ ವಿರೋಧಿಗಳು ಹೆಚ್ಚುತ್ತಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದಲ್ಲಿನ ಕೆರೆಗಳ ಒತ್ತುವರಿ ವಿಷಯ ವಿಧಾನಸಭೆಯಲ್ಲಿ ಸೋಮವಾರ ಕೋಲಾಹಲಕ್ಕೆ ಕಾರಣವಾಯಿತು. ‘ಬೆಂಗಳೂರಿನ ಕೆರೆಗಳನ್ನು ಮುಚ್ಚಿದ್ದು ಯಾರು’ ಎಂಬ ಪ್ರಶ್ನೆಯನ್ನೇ ಮುಂದಿಟ್ಟುಕೊಂಡು ಆಡಳಿತಾರೂಢ ಬಿಜೆಪಿ ಮತ್ತು ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ತೀವ್ರ ವಾಕ್ಸಮರ ನಡೆಸಿದರು.</p>.<p>ಅತಿವೃಷ್ಟಿ ಮತ್ತು ಪ್ರವಾಹದ ಕುರಿತು ನಡೆದ ಚರ್ಚೆಗೆ ಉತ್ತರ ನೀಡಿದ ಕಂದಾಯ ಸಚಿವ ಆರ್. ಅಶೋಕ ಕೆರೆ ಒತ್ತುವರಿ ಬಗ್ಗೆ ಪ್ರಸ್ತಾಪಿಸಿದರು. ‘ಬೆಂಗಳೂರಿನಲ್ಲಿ ಈ ಬಾರಿ ಮಾತ್ರ ಪ್ರವಾಹ ಬಂದಿಲ್ಲ. ಹಿಂದೆಯೂ ಹಲವು ಬಾರಿ ಇದೇ ಸಮಸ್ಯೆ ಆಗಿತ್ತು. ಇದು ಮಾನವ ನಿರ್ಮಿತ ಸಮಸ್ಯೆ. ಹಿಂದೆ ಆಡಳಿತ ನಡೆಸಿದವರಿಗೆ ದೂರದೃಷ್ಟಿ ಇದ್ದಿದ್ದರೆ ಈ ಸಮಸ್ಯೆ ಆಗುತ್ತಿರಲಿಲ್ಲ’ ಎಂದರು.</p>.<p>ಆಗ ಮಧ್ಯ ಪ್ರವೇಶಿಸಿದ ಕಾಂಗ್ರೆಸ್ನ ಕೆ.ಜೆ. ಜಾರ್ಜ್, ‘ನಾನು ಕೆರೆ ಕಬಳಿಸಿದ್ದೇನೆ ಎಂದು ನಿಮ್ಮ ಪಕ್ಷದವರು ಟ್ರೋಲ್ ಮಾಡುತ್ತಿದ್ದಾರೆ. ನನ್ನ ಕಾಲದಲ್ಲಿ ಯಾವ ಕೆರೆ ಮುಚ್ಚಿದ್ದೇನೆ ತೋರಿಸಿ? ನಾನು ಕಾನೂನುಬಾಹಿರ ಕೆಲಸ ಮಾಡಿದ್ದರೆ ಕ್ರಮ ಜರುಗಿಸಿ’ ಎಂದು ಸವಾಲು ಹಾಕಿದರು.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, ‘ಯಾರು ಕೆರೆ ಕಬಳಿಸಿದ್ದಾರೆ ಎಂಬುದರ ತನಿಖೆ ಮಾಡಲಾಗುವುದು. ಕೆರೆಗಳ ಜಮೀನು ಮತ್ತು ನಿರ್ಬಂಧಿತ ವಲಯದಲ್ಲಿ (ಬಫರ್ ಝೋನ್) ಅತಿಕ್ರಮಣ, ಕಟ್ಟಡ ನಿರ್ಮಾಣ ನಿಷೇಧಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ 2007ರಲ್ಲಿ ಆದೇಶ ಹೊರಡಿಸಿತ್ತು. ಆ ಬಳಿಕವೂ ಹಲವು ಕೆರೆಗಳ ಅತಿಕ್ರಮಣ ನಡೆದಿದೆ. ಇದಕ್ಕೆ ಹೊಣೆ ಯಾರು ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗುವುದು. ಕೆರೆಗಳ ಕಣ್ಮರೆಗೆ ಕಾರಣವಾಗಿರುವವರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ಹೇಳಿದರು.</p>.<p><strong>ಕೆರೆ ಸ್ವರೂಪ ಅಳಿಸಲು ಯತ್ನ:</strong> ‘ಮೂಲ ಸ್ವರೂಪ ಕಳೆದುಕೊಂಡ ಕೆರೆಗಳನ್ನು ದಾಖಲೆಗಳಿಂದ ಅಳಿಸಿ ಹಾಕುವ ಪ್ರಯತ್ನ 2018ರಲ್ಲಿ ನಡೆದಿತ್ತು. ಭೂ ಕಂದಾಯ ಕಾಯ್ದೆಯ ಸೆಕ್ಷನ್–68ರ ಅಡಿಯಲ್ಲಿ ಆ ರೀತಿಯ ತೀರ್ಮಾನ ಕೈಗೊಳ್ಳಲು ಅವಕಾಶ ಇಲ್ಲ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅಭಿಪ್ರಾಯ ನೀಡಿದ್ದರು. ಅದನ್ನು ಬದಿಗೊತ್ತಿ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು. ಜನರಿಂದ ವಿರೋಧ ವ್ಯಕ್ತವಾದ ಕಾರಣದಿಂದ ಸರ್ಕಾರ ಆ ತೀರ್ಮಾನವನ್ನು ಅನು ಷ್ಠಾನಕ್ಕೆ ತಂದಿರಲಿಲ್ಲ’ ಎಂದು ಮುಖ್ಯಮಂತ್ರಿ ಹೇಳಿದರು.</p>.<p><strong>ಅಲ್ಲಗಳೆದ ಸಿದ್ದರಾಮಯ್ಯ: ‘</strong>ನಮ್ಮ ಅವಧಿಯಲ್ಲಿ ಆ ರೀತಿಯ ತೀರ್ಮಾನ ಕೈಗೊಂಡಿರಲಿಲ್ಲ. ಮೂಲ ಸ್ವರೂಪ ಕಳೆದುಕೊಂಡ ಕೆರೆಗಳನ್ನು ಪಟ್ಟಿಯಿಂದ ಕೈಬಿಡುವ ನಿರ್ಧಾರ ಮಾಡಿದ್ದೆವು. ಆದರೆ, ಅದನ್ನು ಅನುಷ್ಠಾನಕ್ಕೆ ತರಲಿಲ್ಲ’ ಎಂದು ಸಿದ್ದರಾಮಯ್ಯ ಹೇಳಿದರು.</p>.<p>ಬೆಂಬಲಕ್ಕೆ ನಿಂತ ಜಾರ್ಜ್, ‘ಆಗ ಕಂದಾಯ ಸಚಿವರಾಗಿದ್ದ ಕಾಗೋಡು ತಿಮ್ಮಪ್ಪ ಕ್ಷೇತ್ರದಲ್ಲಿ ಉಂಟಾದ ಸಮಸ್ಯೆ ಕಾರಣದಿಂದ ಈ ಪ್ರಸ್ತಾವ ಸಂಪುಟದ ಮುಂದೆ ಬಂದಿತ್ತು’ ಎಂದರು.</p>.<p>‘ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಏಕೆ ಮುಟ್ಟಿಕೊಳ್ಳುತ್ತೀರಿ? ಕೆರೆಗಳನ್ನು ನುಂಗುವುದೇ ನಿಮ್ಮ ಉದ್ದೇಶವಾಗಿತ್ತು ಎಂಬುದು ಸಾಬೀತಾಗಿದೆ’ ಎಂದು ಬೊಮ್ಮಾಯಿ ಏರಿದ ಧ್ವನಿಯಲ್ಲಿ ಹೇಳಿದರು.</p>.<p>‘ಹಳೆಯ ವಿಷಯ ಪ್ರಸ್ತಾಪಿಸಿ ದಿಕ್ಕು ತಪ್ಪಿಸಬೇಡಿ. ಸುಭಾಶ್ ನಗರದ ಕೆರೆಯಲ್ಲಿ ಬಸ್ ನಿಲ್ದಾಣವಿದೆ. ಅದನ್ನು ಮತ್ತೆ ಕೆರೆಯನ್ನಾಗಿ ಮಾಡಲು ಸಾಧ್ಯವೆ’ ಎಂದು ಸಿದ್ದರಾಮಯ್ಯ ಕೇಳಿದರು.</p>.<p>ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ವಾಕ್ಸಮರಕ್ಕೆ ಇಳಿದರು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಲಾಪವನ್ನು ಮಧ್ಯಾಹ್ನದ ಭೋಜನ ವಿರಾಮಕ್ಕೆ ಮುಂದೂಡಿದರು.</p>.<p><strong>‘ಸೊಳ್ಳೆ ಕಾಟಕ್ಕೆ ಕೆರೆ ಮುಚ್ಚಿದ್ದರಂತೆ’</strong><br />‘ಸೊಳ್ಳೆ ಕಾಟದ ಕಾರಣಕ್ಕಾಗಿ ಕೆರೆಗಳನ್ನು ಮುಚ್ಚಿರಬಹುದು’ ಎಂದು ಕಾಂಗ್ರೆಸ್ ಶಾಸಕ ಕೆ.ಜೆ. ಜಾರ್ಜ್ ವಿಧಾನಸಭೆಯಲ್ಲೇ ಹೇಳಿದ್ದರು. ಈ ವಿಷಯವನ್ನು ಮುಂದಿಟ್ಟುಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಅವರನ್ನು ‘ಟ್ರೋಲ್’ ಮಾಡಲಾಗುತ್ತಿದೆ. ಸೋಮವಾರ ಸದನದಲ್ಲಿ ಈ ಕುರಿತು ಪ್ರಸ್ತಾಪಿಸಿದ ಅವರು, ತೀವ್ರ ಬೇಸರ ವ್ಯಕ್ತಪಡಿಸಿದರು.</p>.<p><strong>42 ಕೆರೆಗಳ ಪಟ್ಟಿ ನೀಡಿದ ಅಶೋಕ</strong><br />ನಗರದಲ್ಲಿ 1977ರಿಂದ ಈವರೆಗೆ 42 ಕೆರೆಗಳು ಒತ್ತುವರಿಯಾಗಿವೆ ಎಂದು ಕಂದಾಯ ಸಚಿವ ಆರ್. ಅಶೋಕ ಸದನದಲ್ಲೇ ಪಟ್ಟಿ ಓದಿದರು.</p>.<p>ಬಿಡಿಎ 22 ಕೆರೆಗಳನ್ನು ಒತ್ತುವರಿ ಮಾಡಿದೆ. ಬಿಡಿಎ ಅನುಮೋದಿತ ಬಡಾವಣೆಯಲ್ಲಿ ಒಂದು ಕೆರೆ ಮುಚ್ಚಲಾಗಿದೆ. ಬಿಬಿಎಂಪಿ ಐದು ಕೆರೆಗಳನ್ನು ಮುಚ್ಚಿದೆ. ಖಾಸಗಿ ಒತ್ತುವರಿದಾರರು ಏಳು ಕೆರೆಗಳನ್ನು ಅತಿಕ್ರಮಣ ಮಾಡಿದ್ದಾರೆ. ಬಿಡಿಎ ಕೆರೆಗಳನ್ನು ಮುಚ್ಚಿ ನಿರ್ಮಿಸಿದ ಬಡಾವಣೆಗಳಲ್ಲಿ ಅಂದಾಜು ₹ 11,640 ಕೋಟಿ ಮೌಲ್ಯದ ನಿವೇಶನಗಳನ್ನು ಮಾರಾಟ ಮಾಡಿದೆ ಎಂದರು.</p>.<p><strong>‘ಶಕ್ತಿಯುತವಾದಷ್ಟೂ ವಿರೋಧಿಗಳು ಹೆಚ್ಚು’</strong><br />‘ನಾವು ಶಕ್ತಿಯುತವಾದಷ್ಟೂ ವಿರೋಧಿಗಳು ಹೆಚ್ಚು. ದುರ್ಬಲವಾದಷ್ಟೂ ವಿರೋಧಿಗಳು ಕಡಿಮೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.</p>.<p>ಕೆರೆಗಳನ್ನು ಮುಚ್ಚಿರುವ ಕುರಿತ ಚರ್ಚೆಯ ವೇಳೆ, ‘ಸಿದ್ದರಾಮಯ್ಯ ಮತ್ತು ಜಾರ್ಜ್ ಅವರೇ ನಿಮ್ಮ ಕಾಲದಲ್ಲಿ ಆಗಿಲ್ಲ ಬಿಡಿ. ನಿಮಗೆ ವಿರೋಧಿಗಳು ಹೆಚ್ಚು. ನೀವು ಹಾಗೆ ಮಾಡುವುದಕ್ಕೂ ಆಗುತ್ತಿರಲಿಲ್ಲ’ ಎಂದು ಅಶೋಕ ತಮಾಶೆ ಮಾಡಿದರು.</p>.<p>ಆಗ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ಶಕ್ತಿಯುತವಾದಷ್ಟೂ ವಿರೋಧಿಗಳು ಹೆಚ್ಚುತ್ತಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>