<p><strong>ನವದೆಹಲಿ/ಬೆಂಗಳೂರು: </strong>ಆಡಳಿತ ಪಕ್ಷ ಬಿಜೆಪಿ ಅಭ್ಯರ್ಥಿ ಘೋಷಿಸುವ ಮೊದಲೇ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಕಾಂಗ್ರೆಸ್, ಒಂದು ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಿಸುವ ಮೂಲಕ ಉಪಚುನಾವಣೆಯ ಅಖಾಡಕ್ಕೆ ಧುಮುಕಿವೆ.</p>.<p>ಮಸ್ಕಿ ಮತ್ತು ಸಿಂದಗಿ ಕ್ಷೇತ್ರದಲ್ಲಿ ಕ್ರಮವಾಗಿ ಬಿಜೆಪಿ, ಜೆಡಿಎಸ್ನಿಂದ ವಲಸೆ ಬಂದ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದರೆ, 15 ವರ್ಷಗಳಿಂದ ಕಾಂಗ್ರೆಸ್ನಲ್ಲಿದ್ದು ಗುರುವಾರವಷ್ಟೇ ಪಕ್ಷ ಸೇರಿದ್ದವರಿಗೆ ಜೆಡಿಎಸ್ ಟಿಕೆಟ್ ಕೊಟ್ಟಿದೆ.</p>.<p>ಚುನಾವಣೆ ದಿನಾಂಕ ಪ್ರಕಟವಾದ ಕೂಡಲೇ ಅಭ್ಯರ್ಥಿ ಪಟ್ಟಿ ಘೋಷಿಸಿ, ಆರಂಭದಿಂದಲೇ ಸಿದ್ಧತೆ ನಡೆಸುವ ಕೆಲಸವನ್ನು ಸಾಮಾನ್ಯವಾಗಿ ಬಿಜೆಪಿ ಮಾಡುತ್ತಿತ್ತು. ಈಗ, ಕಾಂಗ್ರೆಸ್ ಈ ಕೆಲಸ ಮಾಡಿದೆ.</p>.<p>ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಶನಿವಾರ ಬೆಂಗಳೂರಿಗೆ ಬರಲಿದ್ದು, ಆ ಬಳಿಕ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ಸಿಗಲಿದೆ.</p>.<p>ಬಸವಕಲ್ಯಾಣ ಕ್ಷೇತ್ರದಲ್ಲಿ ಶಾಸಕರಾಗಿದ್ದ ದಿವಂಗತ ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಅವರಿಗೆ ಟಿಕೆಟ್ ನೀಡಲಾಗಿದೆ. ಇತ್ತೀಚೆಗಷ್ಟೇ ಬಿಜೆಪಿ ತೊರೆದು ಪಕ್ಷ ಸೇರಿದ್ದ ಬಸವನಗೌಡ ತುರವೀಹಾಳ ಅವರನ್ನು ಮಸ್ಕಿ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.</p>.<p>2018ರಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನ ಪ್ರತಾಪಗೌಡ ಪಾಟೀಲ (ಇವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದಾರೆ) ವಿರುದ್ಧ ಬಿಜೆಪಿಯಿಂದ ಸ್ಫರ್ಧಿಸಿದ್ದ ಬಸವನಗೌಡ ಅಲ್ಪ ಮತಗಳ ಅಂತರದಿಂದ ಸೋಲನುಭವಿಸಿದ್ದರು.</p>.<p>ಬಸವಕಲ್ಯಾಣ ಮತ್ತು ಮಸ್ಕಿ ಕ್ಷೇತ್ರದ ಉಪಚುನಾವಣೆಗೆ ಏಪ್ರಿಲ್ 17ರಂದು ಮತದಾನ ನಡೆಯಲಿದೆ. ಚುನಾವಣೆ ದಿನಾಂಕ ಘೋಷಣೆಯಾಗದ ಸಿಂದಗಿ ಕ್ಷೇತ್ರಕ್ಕೂ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದೆ. ಅಶೋಕ ಮನಗೂಳಿ ಅವರು ಕಣಕ್ಕಿಳಿಯಲಿದ್ದಾರೆ.</p>.<p><strong>ಜೆಡಿಎಸ್ನಿಂದ ಖಾದ್ರಿ:</strong> ಬಸವ ಕಲ್ಯಾಣ ಕ್ಷೇತ್ರದ ಅಭ್ಯರ್ಥಿಯಾಗಿ ಸೈಯದ್ ಯಸ್ರಬ್ ಅಲಿ ಖಾದ್ರಿ ಅವರನ್ನು ಕಣಕ್ಕೆ ಇಳಿಸುವುದಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.</p>.<p>‘ಉಪಚುನಾವಣೆಯನ್ನು ನಾವು ಲಘುವಾಗಿ ಪರಿಗಣಿಸಿಲ್ಲ. ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇವೆ’ ಎಂದು ಹೇಳಿದರು.</p>.<p>‘ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ ಕೂಡಲೇ, ಬಿಜೆಪಿಗೆ ಅನುಕೂಲವಾಗುವಂತೆ ಜೆಡಿಎಸ್ ನಡೆದುಕೊಂಡಿದೆ ಎಂದು ಕಾಂಗ್ರೆಸ್ ನಾಯಕರು ನಾಳೆಯಿಂದಲೇ ಟೀಕೆ ಆರಂಭಿಸುತ್ತಾರೆ.ಎರಡೂ ರಾಷ್ಟ್ರೀಯ ಪಕ್ಷಗಳ ಜತೆಗೂ ಸಮಾನ ಅಂತರ ಕಾಯ್ದುಕೊಂಡು ಗೆಲ್ಲಲೇಬೇಕೆಂದು ಕೊನೆಯವರೆಗೂ ಪ್ರಯತ್ನ ಮಾಡುತ್ತೇವೆ’ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ/ಬೆಂಗಳೂರು: </strong>ಆಡಳಿತ ಪಕ್ಷ ಬಿಜೆಪಿ ಅಭ್ಯರ್ಥಿ ಘೋಷಿಸುವ ಮೊದಲೇ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಕಾಂಗ್ರೆಸ್, ಒಂದು ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಿಸುವ ಮೂಲಕ ಉಪಚುನಾವಣೆಯ ಅಖಾಡಕ್ಕೆ ಧುಮುಕಿವೆ.</p>.<p>ಮಸ್ಕಿ ಮತ್ತು ಸಿಂದಗಿ ಕ್ಷೇತ್ರದಲ್ಲಿ ಕ್ರಮವಾಗಿ ಬಿಜೆಪಿ, ಜೆಡಿಎಸ್ನಿಂದ ವಲಸೆ ಬಂದ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದರೆ, 15 ವರ್ಷಗಳಿಂದ ಕಾಂಗ್ರೆಸ್ನಲ್ಲಿದ್ದು ಗುರುವಾರವಷ್ಟೇ ಪಕ್ಷ ಸೇರಿದ್ದವರಿಗೆ ಜೆಡಿಎಸ್ ಟಿಕೆಟ್ ಕೊಟ್ಟಿದೆ.</p>.<p>ಚುನಾವಣೆ ದಿನಾಂಕ ಪ್ರಕಟವಾದ ಕೂಡಲೇ ಅಭ್ಯರ್ಥಿ ಪಟ್ಟಿ ಘೋಷಿಸಿ, ಆರಂಭದಿಂದಲೇ ಸಿದ್ಧತೆ ನಡೆಸುವ ಕೆಲಸವನ್ನು ಸಾಮಾನ್ಯವಾಗಿ ಬಿಜೆಪಿ ಮಾಡುತ್ತಿತ್ತು. ಈಗ, ಕಾಂಗ್ರೆಸ್ ಈ ಕೆಲಸ ಮಾಡಿದೆ.</p>.<p>ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಶನಿವಾರ ಬೆಂಗಳೂರಿಗೆ ಬರಲಿದ್ದು, ಆ ಬಳಿಕ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ಸಿಗಲಿದೆ.</p>.<p>ಬಸವಕಲ್ಯಾಣ ಕ್ಷೇತ್ರದಲ್ಲಿ ಶಾಸಕರಾಗಿದ್ದ ದಿವಂಗತ ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಅವರಿಗೆ ಟಿಕೆಟ್ ನೀಡಲಾಗಿದೆ. ಇತ್ತೀಚೆಗಷ್ಟೇ ಬಿಜೆಪಿ ತೊರೆದು ಪಕ್ಷ ಸೇರಿದ್ದ ಬಸವನಗೌಡ ತುರವೀಹಾಳ ಅವರನ್ನು ಮಸ್ಕಿ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.</p>.<p>2018ರಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನ ಪ್ರತಾಪಗೌಡ ಪಾಟೀಲ (ಇವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದಾರೆ) ವಿರುದ್ಧ ಬಿಜೆಪಿಯಿಂದ ಸ್ಫರ್ಧಿಸಿದ್ದ ಬಸವನಗೌಡ ಅಲ್ಪ ಮತಗಳ ಅಂತರದಿಂದ ಸೋಲನುಭವಿಸಿದ್ದರು.</p>.<p>ಬಸವಕಲ್ಯಾಣ ಮತ್ತು ಮಸ್ಕಿ ಕ್ಷೇತ್ರದ ಉಪಚುನಾವಣೆಗೆ ಏಪ್ರಿಲ್ 17ರಂದು ಮತದಾನ ನಡೆಯಲಿದೆ. ಚುನಾವಣೆ ದಿನಾಂಕ ಘೋಷಣೆಯಾಗದ ಸಿಂದಗಿ ಕ್ಷೇತ್ರಕ್ಕೂ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದೆ. ಅಶೋಕ ಮನಗೂಳಿ ಅವರು ಕಣಕ್ಕಿಳಿಯಲಿದ್ದಾರೆ.</p>.<p><strong>ಜೆಡಿಎಸ್ನಿಂದ ಖಾದ್ರಿ:</strong> ಬಸವ ಕಲ್ಯಾಣ ಕ್ಷೇತ್ರದ ಅಭ್ಯರ್ಥಿಯಾಗಿ ಸೈಯದ್ ಯಸ್ರಬ್ ಅಲಿ ಖಾದ್ರಿ ಅವರನ್ನು ಕಣಕ್ಕೆ ಇಳಿಸುವುದಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.</p>.<p>‘ಉಪಚುನಾವಣೆಯನ್ನು ನಾವು ಲಘುವಾಗಿ ಪರಿಗಣಿಸಿಲ್ಲ. ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇವೆ’ ಎಂದು ಹೇಳಿದರು.</p>.<p>‘ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ ಕೂಡಲೇ, ಬಿಜೆಪಿಗೆ ಅನುಕೂಲವಾಗುವಂತೆ ಜೆಡಿಎಸ್ ನಡೆದುಕೊಂಡಿದೆ ಎಂದು ಕಾಂಗ್ರೆಸ್ ನಾಯಕರು ನಾಳೆಯಿಂದಲೇ ಟೀಕೆ ಆರಂಭಿಸುತ್ತಾರೆ.ಎರಡೂ ರಾಷ್ಟ್ರೀಯ ಪಕ್ಷಗಳ ಜತೆಗೂ ಸಮಾನ ಅಂತರ ಕಾಯ್ದುಕೊಂಡು ಗೆಲ್ಲಲೇಬೇಕೆಂದು ಕೊನೆಯವರೆಗೂ ಪ್ರಯತ್ನ ಮಾಡುತ್ತೇವೆ’ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>