ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಬಹುಮತ: ಯುಪಿ+ಯೋಗಿ = ಉಪಯೋಗಿ ಎಂದ ಸುಧಾಕರ್

Last Updated 10 ಮಾರ್ಚ್ 2022, 7:30 IST
ಅಕ್ಷರ ಗಾತ್ರ

ಬೆಂಗಳೂರು: ಯೋಗಿ ಆದಿತ್ಯನಾಥ ಅವರು ಉತ್ತರ ಪ್ರದೇಶವನ್ನು ಉತ್ತಮ ಪ್ರದೇಶವಾಗಿ ಪರಿವರ್ತಿಸುವ ಮೂಲಕ ‘ಯುಪಿ+ಯೋಗಿ’ನಿಶ್ಚಯವಾಗಿ 'ಉಪಯೋಗಿ' ಎಂಬುದನ್ನು ಸಾಬೀತು ಪಡಿಸಿದ್ದಾರೆ ಎಂದು ಡಾ.ಕೆ.ಸುಧಾಕರ್ ಬಣ್ಣಿಸಿದ್ದಾರೆ.

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಕುರಿತು ಟ್ವೀಟ್ ಮಾಡಿರುವ ಅವರು, ‘ಉತ್ತರ ಪ್ರದೇಶವನ್ನು ಉತ್ತಮ ಪ್ರದೇಶವಾಗಿ ಪರಿವರ್ತಿಸುವ ಮೂಲಕ ‘ಯುಪಿ+ಯೋಗಿ’ನಿಶ್ಚಯವಾಗಿ ‘ಉಪಯೋಗಿ’ಎಂಬುದನ್ನು ಸಾಬೀತು ಪಡಿಸಿದೆ. ಬಿಜೆಪಿಗೆ ಉತ್ತರ ಪ್ರದೇಶದಲ್ಲಿ ಐತಿಹಾಸಿಕ ಮತ್ತು ದೊಡ್ಡ ಗೆಲುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ಅಚಲ ನಂಬಿಕೆ ಮತ್ತು ಮಹಾಂತ ಯೋಗಿ ಆದಿತ್ಯನಾಥ್‌ ಜೀ ಅವರ ವಿಕಾಸ ಮಂತ್ರದ ಫಲವಿದು’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಸ್ಪಷ್ಟ ಬಹುಮತದೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೇರುವುದು ಬಹುತೇಕ ಖಚಿತವಾಗಿದೆ.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT