ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಕುರಿತು ಟ್ವೀಟ್ ಮಾಡಿರುವ ಅವರು, ‘ಉತ್ತರ ಪ್ರದೇಶವನ್ನು ಉತ್ತಮ ಪ್ರದೇಶವಾಗಿ ಪರಿವರ್ತಿಸುವ ಮೂಲಕ ‘ಯುಪಿ+ಯೋಗಿ’ನಿಶ್ಚಯವಾಗಿ ‘ಉಪಯೋಗಿ’ಎಂಬುದನ್ನು ಸಾಬೀತು ಪಡಿಸಿದೆ. ಬಿಜೆಪಿಗೆ ಉತ್ತರ ಪ್ರದೇಶದಲ್ಲಿ ಐತಿಹಾಸಿಕ ಮತ್ತು ದೊಡ್ಡ ಗೆಲುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ಅಚಲ ನಂಬಿಕೆ ಮತ್ತು ಮಹಾಂತ ಯೋಗಿ ಆದಿತ್ಯನಾಥ್ ಜೀ ಅವರ ವಿಕಾಸ ಮಂತ್ರದ ಫಲವಿದು’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.