ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ನೆರವಾಗಲು ಮುಖ್ಯಮಂತ್ರಿ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. ಅದರಲ್ಲಿ ಆಟೊ ಅಥವಾ ಟ್ಯಾಕ್ಸಿ ಚಾಲಕರಿಗೆ, ಕ್ಷೌರಿಕರು, ಅಗಸರಿಗೆ ₹5 ಸಾವಿರ, ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ಗೆ ₹25 ಸಾವಿರ, ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ಹೆಕ್ಟೇರ್ಗೆ ₹15 ಸಾವಿರ ನೀಡಲಾಗುತ್ತದೆ ಎಂದು ಪ್ರಕಟಿಸಿದ್ದರು. ಈ ಮೊತ್ತವನ್ನು ಬಜೆಟ್ನಲ್ಲಿ ಪ್ರಕಟಿಸಲಿಲ್ಲ. ಇದನ್ನು ಸಾದಿಲ್ವಾರು ನಿಧಿಯಿಂದ ಭರಿಸಲಾಗುತ್ತಿದೆ ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.