ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ಉಡುಪಿಯಲ್ಲಿ ಆರು ವಿದ್ಯಾರ್ಥಿನಿಯರಿಂದ ಆರಂಭವಾದ ಹಿಜಾಬ್ ವಿವಾದ ರಾಜ್ಯದಾದ್ಯಂತ ಹಬ್ಬಿದೆ. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಮಾರ್ಚ್ 15ರಂದು ತೀರ್ಪು ನೀಡಿದೆ. ಈ ತೀರ್ಪಿಗೆ ವಿರುದ್ಧವಾಗಿ 17ರಂದು ಕೆಲವು ಮುಸ್ಲಿಂ ಸಂಘಟನೆಗಳು ಬಂದ್ ನಡೆಸಿವೆ. ಬಂದ್ನಿಂದ ಜನಜೀವನ ಅಸ್ತವ್ಯಸ್ತವಾಗಿದೆ. ವ್ಯಾಪಾರ ವಹಿವಾಟಿಗೆ ತೊಂದರೆಯಾಗಿದೆ’ ಎಂದು ಆಕ್ಷೇಪಿಸಿದರು.