<p><strong>ಬೆಂಗಳೂರು: </strong>ರಾಜ್ಯ ವಿಧಾನಮಂಡಲ ಅಧಿವೇಶನ ಮಾರ್ಚ್ 4 ರಿಂದ 19 ದಿನ ನಡೆಯಲಿದೆ. ಮೊದಲ ಎರಡು ದಿನ ‘ಒಂದು ರಾಷ್ಟ್ರ– ಒಂದು ಚುನಾವಣೆ’ ಕುರಿತು ಚರ್ಚೆ ನಡೆಯಲಿದೆ.ಮಾರ್ಚ್ 8 ರಂದು ಬಜೆಟ್ ಮಂಡನೆಯಾಗಲಿದೆ.</p>.<p>‘ಗುಜರಾತ್ನ ಕೆವಾಡಿಯಾದಲ್ಲಿ ನಡೆದಿದ್ದ ಸ್ಪೀಕರ್ಗಳ ಸಮ್ಮೇಳನದ ನಿರ್ಣಯದಂತೆ ‘ಒಂದು ರಾಷ್ಟ್ರ– ಒಂದು ಚುನಾವಣೆ’ ಕುರಿತು ಚರ್ಚಿಸಲು ಸಮಯ ನಿಗದಿ ಮಾಡಲಾಗಿದೆ’ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ವಿಧಾನಪರಿಷತ್ತಿನಲ್ಲೂ ಈ ಕುರಿತು ಎರಡು ದಿನಗಳ ಚರ್ಚೆ ನಡೆಯಲಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.</p>.<p>ಈ ಅಧಿವೇಶನದಲ್ಲಿ ಕರ್ನಾಟಕ ಪೌರಸಭೆಗಳ ಮಸೂದೆ–2021, ಸೊಸೈಟಿಗಳ ನೋಂದಣಿ ಮಸೂದೆ–2021 ಮತ್ತು ಲೇವಾದೇವಿದಾರರ ನೋಂದಣಿ ಮಸೂದೆ–2021ರ ಮಂಡನೆ ಆಗಲಿದೆ. ಪ್ರಶ್ನೋತ್ತರ ಸೇರಿ ಎಲ್ಲ ಕಲಾಪಗಳಿಗೂ ಸಮಯ ನಿಗದಿ ಮಾಡಲಾಗಿದೆ ಎಂದು ತಿಳಿಸಿದರು.</p>.<p>ಕೋವಿಡ್ ಕಾರಣದಿಂದ ಕೆಲವು ತಿಂಗಳುಗಳಿಂದ ಸಾರ್ವಜನಿಕರಿಗೆ ವಿಧಾನಸಭೆಯ ಕಲಾಪ ವೀಕ್ಷಿಸಲು ಅವಕಾಶ ನೀಡಿರಲಿಲ್ಲ. ಈ ಬಾರಿ ಗ್ಯಾಲರಿಯಲ್ಲಿ ಅಂತರ ಕಾಯ್ದುಕೊಂಡು ಸಾರ್ವಜನಿಕರಿಗೂ ಕಲಾಪ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುವುದು. ಶಾಲಾ– ಕಾಲೇಜು ವಿದ್ಯಾರ್ಥಿಗಳಿಗೆ ಕಲಾಪ ವೀಕ್ಷಣೆಗೆ ನಿರ್ಬಂಧ ಮುಂದುವರಿಯಲಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯ ವಿಧಾನಮಂಡಲ ಅಧಿವೇಶನ ಮಾರ್ಚ್ 4 ರಿಂದ 19 ದಿನ ನಡೆಯಲಿದೆ. ಮೊದಲ ಎರಡು ದಿನ ‘ಒಂದು ರಾಷ್ಟ್ರ– ಒಂದು ಚುನಾವಣೆ’ ಕುರಿತು ಚರ್ಚೆ ನಡೆಯಲಿದೆ.ಮಾರ್ಚ್ 8 ರಂದು ಬಜೆಟ್ ಮಂಡನೆಯಾಗಲಿದೆ.</p>.<p>‘ಗುಜರಾತ್ನ ಕೆವಾಡಿಯಾದಲ್ಲಿ ನಡೆದಿದ್ದ ಸ್ಪೀಕರ್ಗಳ ಸಮ್ಮೇಳನದ ನಿರ್ಣಯದಂತೆ ‘ಒಂದು ರಾಷ್ಟ್ರ– ಒಂದು ಚುನಾವಣೆ’ ಕುರಿತು ಚರ್ಚಿಸಲು ಸಮಯ ನಿಗದಿ ಮಾಡಲಾಗಿದೆ’ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ವಿಧಾನಪರಿಷತ್ತಿನಲ್ಲೂ ಈ ಕುರಿತು ಎರಡು ದಿನಗಳ ಚರ್ಚೆ ನಡೆಯಲಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.</p>.<p>ಈ ಅಧಿವೇಶನದಲ್ಲಿ ಕರ್ನಾಟಕ ಪೌರಸಭೆಗಳ ಮಸೂದೆ–2021, ಸೊಸೈಟಿಗಳ ನೋಂದಣಿ ಮಸೂದೆ–2021 ಮತ್ತು ಲೇವಾದೇವಿದಾರರ ನೋಂದಣಿ ಮಸೂದೆ–2021ರ ಮಂಡನೆ ಆಗಲಿದೆ. ಪ್ರಶ್ನೋತ್ತರ ಸೇರಿ ಎಲ್ಲ ಕಲಾಪಗಳಿಗೂ ಸಮಯ ನಿಗದಿ ಮಾಡಲಾಗಿದೆ ಎಂದು ತಿಳಿಸಿದರು.</p>.<p>ಕೋವಿಡ್ ಕಾರಣದಿಂದ ಕೆಲವು ತಿಂಗಳುಗಳಿಂದ ಸಾರ್ವಜನಿಕರಿಗೆ ವಿಧಾನಸಭೆಯ ಕಲಾಪ ವೀಕ್ಷಿಸಲು ಅವಕಾಶ ನೀಡಿರಲಿಲ್ಲ. ಈ ಬಾರಿ ಗ್ಯಾಲರಿಯಲ್ಲಿ ಅಂತರ ಕಾಯ್ದುಕೊಂಡು ಸಾರ್ವಜನಿಕರಿಗೂ ಕಲಾಪ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುವುದು. ಶಾಲಾ– ಕಾಲೇಜು ವಿದ್ಯಾರ್ಥಿಗಳಿಗೆ ಕಲಾಪ ವೀಕ್ಷಣೆಗೆ ನಿರ್ಬಂಧ ಮುಂದುವರಿಯಲಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>