ಕಾರ್ಮಿಕರ ಸಂಘದ ಅಧ್ಯಕ್ಷ ಗುರು ಬೋರ್ಗಿಕರ ಮಾತನಾಡಿ, ‘ಹಲವು ವರ್ಷಗಳಿಂದ ದಬ್ಬಾಳಿಕೆ ನಡೆಯುತ್ತಿದೆ. ಆಡಳಿತದ ವಿರುದ್ಧ ಕಾರ್ಮಿಕರು ಮಾತನಾಡಲು ಆರಂಭಿಸಿದರೆ ಅವರಿಗೆ ಕೆಲಸದಿಂದ ಬಿಡುವು ಕೊಟ್ಟು, ಸಂಬಳ ನೀಡದೆ ಕಿರುಕುಳ ನೀಡುತ್ತಿದ್ದಾರೆ. ಯಾರ ವಿರುದ್ಧವೂ ಮಾತನಾಡುವುದಿಲ್ಲ ಎಂದು ಬಾಂಡ್ ಬರೆಸಿಕೊಳ್ಳಲಾಗುತ್ತಿದೆ. ಈ ಘಟನೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರು ಕ್ಷಮೆ ಕೇಳಿದರೆ ಸಾಲದು. ಅವರನ್ನು ವರ್ಗಾಯಿಸಬೇಕು’ ಎಂದು ಒತ್ತಾಯಿಸಿದರು.