ಘಟನೆಯ ನಂತರ ಗಾಂಧಿ ಬಜಾರ್,ಆಜಾದ್ ನಗರ,ರವಿವರ್ಮ ಬೀದಿಯಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದಿದೆ. ರಾಮಣ್ಣ ಶ್ರೇಷ್ಠಿ ಪಾರ್ಕ್ ಬಳಿ ನಾಲ್ಕು ಕಾರು, ಕಸ್ತೂರ ಬಾ ರಸ್ತೆಯಲ್ಲಿ ಒಂದು ಆಟೊರಿಕ್ಷಾ ಜಖಂಗೊಂಡಿವೆ. ಚೋರ್ ಬಜಾರ್ನಲ್ಲಿ ಮೂವರು ವ್ಯಾಪಾರಿಗಳ ಮೇಲೆ ಹಲ್ಲೆ ನಡೆದಿದೆ. ಇಡೀ ಗಾಂಧಿ ಬಜಾರ್ ಸ್ತಬ್ಧವಾಗಿದೆ. ಗ್ರಾಹಕರನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಲಾಗಿದೆ.