ಮಲ್ಪೆ ಸೀವಾಕ್ ಬಳಿ ಗುರುವಾರ ರಾತ್ರಿ ಬಯಲು ರಂಗಮಂದಿರ ಉದ್ಘಾಟಿಸಿ ಮಾತನಾಡಿದ ಸಚಿವರು, ‘ಶಿವಮೊಗ್ಗದ ಎರಡು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಗಲಾಟೆ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ಮುಂದೆ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಪೂರ್ವವಲಯ ಐಜಿಪಿ ಹಾಗೂ ಎಸ್ಪಿ ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಪರಿಸ್ಥಿತಿ ನೋಡಿಕೊಂಡು ಕರ್ಫ್ಯೂ ಜಾರಿಗೆ ಸೂಚನೆ ನೀಡಿದ್ದೇನೆ’ ಎಂದರು.