ನಿಯಮಿತ ಜಾಮೀನು ಕೋರಿ ಆರೋಪಿಗಳಾದ ಅತೀಕ್ ಅಹಮದ್, ಶಫಿ ಖಾನ್, ಶಾಹಿದ್ ಪಾಷ ವಲಿ, ತಬ್ರೇಝ್ ಮತ್ತು ಅಬ್ದುಲ್ ಬಶೀರ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಶಿವಶಂಕರ ಅಮರಣ್ಣವರ ಅವರಿದ್ದ ವಿಭಾಗೀಯ ನ್ಯಾಯಪೀಠ ಕಳೆದ ಜುಲೈ 19ರಂದು ಕಾಯ್ದಿರಿಸಿದ್ದ ತೀರ್ಪು ಪ್ರಕಟಿಸಿದೆ.