ಬೆಂಗಳೂರು: ಡಾ. ರಾಜ್ಕುಮಾರ್ ಕುಟುಂಬದ ಬಗ್ಗೆ ಅವಹೇಳನ ಮಾಡಿದರೆಂಬ ಕಾರಣಕ್ಕೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಮೇಲೆ ಹಲ್ಲೆ ಮಾಡಲಾಗಿದ್ದು, ಈ ಬಗ್ಗೆ ಇದುವರೆಗೂ ಯಾವುದೇ ಠಾಣೆಯಲ್ಲಿ ದೂರು ದಾಖಲಾಗಿಲ್ಲ.
ಚಾಮರಾಜಪೇಟೆ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿರುವ ಘಟನೆ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಹಲ್ಲೆಯನ್ನು ಖಂಡಿಸಿರುವ ಸಂಘಟನೆ ಸದಸ್ಯರು, 'ಡಾ. ರಾಜ್ ಕುಟುಂಬದ ಹೆಸರಿನಲ್ಲಿ ಪುನೀತ್ ಕೆರೆಹಳ್ಳಿ ಕೊಲೆಗೆ ಯತ್ನಿಸಿದ್ದಾರೆ' ಎಂದು ಆರೋಪಿಸಿದ್ದಾರೆ.