ಡಾ.ರಾಜ್ಕುಮಾರ್ ಕುಟುಂಬದ ಬಗ್ಗೆ ಅವಹೇಳನ ಆರೋಪ: ಪುನೀತ್ ಕೆರೆಹಳ್ಳಿ ಮೇಲೆ ಹಲ್ಲೆ

ಬೆಂಗಳೂರು: ಡಾ. ರಾಜ್ಕುಮಾರ್ ಕುಟುಂಬದ ಬಗ್ಗೆ ಅವಹೇಳನ ಮಾಡಿದರೆಂಬ ಕಾರಣಕ್ಕೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಮೇಲೆ ಹಲ್ಲೆ ಮಾಡಲಾಗಿದ್ದು, ಈ ಬಗ್ಗೆ ಇದುವರೆಗೂ ಯಾವುದೇ ಠಾಣೆಯಲ್ಲಿ ದೂರು ದಾಖಲಾಗಿಲ್ಲ.
ಚಾಮರಾಜಪೇಟೆ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿರುವ ಘಟನೆ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಹಲ್ಲೆಯನ್ನು ಖಂಡಿಸಿರುವ ಸಂಘಟನೆ ಸದಸ್ಯರು, 'ಡಾ. ರಾಜ್ ಕುಟುಂಬದ ಹೆಸರಿನಲ್ಲಿ ಪುನೀತ್ ಕೆರೆಹಳ್ಳಿ ಕೊಲೆಗೆ ಯತ್ನಿಸಿದ್ದಾರೆ' ಎಂದು ಆರೋಪಿಸಿದ್ದಾರೆ.
ಇವನ್ನೂ ಓದಿ...
ದರ್ಶನ್ ಎದುರೇ ಅಪ್ಪು ಅಭಿಮಾನಿಗಳ ಆಕ್ರೋಶ: ಪುನೀತ್ ಭಾವಚಿತ್ರ ಹಿಡಿದು ಕುಣಿದರು
ನಟ ದರ್ಶನ್ ಮೇಲಿನ ಕೃತ್ಯ ಮನಸ್ಸಿಗೆ ನೋವುಂಟು ಮಾಡಿದೆ: ಶಿವರಾಜ್ ಕುಮಾರ್
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.