ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎಲ್ಲಿ ₹5 ಸಾವಿರ?’: ನಾಳೆ ಆಟೊ ಚಾಲಕರ ಪ್ರತಿಭಟನೆ

Last Updated 17 ಆಗಸ್ಟ್ 2020, 21:31 IST
ಅಕ್ಷರ ಗಾತ್ರ

ಬೆಂಗಳೂರು: ‘ಲಾಕ್‍ಡೌನ್ ಪರಿಹಾರವಾಗಿ ಎಲ್ಲ ಆಟೊ ಚಾಲಕರಿಗೆ ₹5 ಸಾವಿರ ಪರಿಹಾರಧನ ನೀಡದೆ ರಾಜ್ಯ ಸರ್ಕಾರ ವಂಚಿಸಿದೆ. ಇದನ್ನು ಖಂಡಿಸಿ ‘ಎಲ್ಲಿ ₹5 ಸಾವಿರ’ ಎಂಬ ಘೋಷವಾಕ್ಯದೊಂದಿಗೆ ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಇದೇ 19ರಂದು ಪ್ರತಿಭಟಿಸಲಾಗುವುದು’ ಎಂದು ಆಮ್ ಆದ್ಮಿ ಪಕ್ಷದ ಆಟೊ ಘಟಕದ ಅಧ್ಯಕ್ಷ ಅಯೂಬ್ ಖಾನ್ ತಿಳಿಸಿದರು.

‘ಪ್ರತಿಭಟನೆಗೆ ಆಟೊ ಚಾಲಕರ 20ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿವೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಆದರ್ಶ ಆಟೊ ಮತ್ತು ಟ್ಯಾಕ್ಸಿ ಚಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಸಂಪತ್, ‘ರಾಜ್ಯದಲ್ಲಿ ಏಳು ಲಕ್ಷಕ್ಕೂ ಹೆಚ್ಚು ಆಟೊ ಚಾಲಕರಿದ್ದಾರೆ. ಇವರಲ್ಲಿ 3.5 ಲಕ್ಷ ಮಂದಿ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿದ್ದರು. 40 ಸಾವಿರ ಚಾಲಕರಿಗೆ ಮಾತ್ರ ಸರ್ಕಾರ ಪರಿಹಾರ ನೀಡಿದ್ದು, ಉಳಿದವರಿಗೆ ಪರಿಹಾರ ಸಿಕ್ಕಿಲ್ಲ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT