ಹಾವೇರಿ: ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಮಲ್ಲಿಕಾ ಘಂಟಿ ಅವರು ಹಾವೇರಿ ಹೊಸಮಠದ ‘ಡಾ.ಶಿಮೂಶ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.
‘ಡಿ.27ರಂದು ಸಂಜೆ 6ಕ್ಕೆ ಹೊಸಮಠದಲ್ಲಿ ನಡೆಯುವ ಶರಣ ಸಂಸ್ಕೃತಿ ಉತ್ಸವದಲ್ಲಿ ಚಿತ್ರದುರ್ಗದ ಬೃಹನ್ಮಠದ ಮುರುಘರಾಜೇಂದ್ರ ಸ್ವಾಮೀಜಿ, ಶೂನ್ಯಪೀಠದ ಅಧ್ಯಕ್ಷ ಡಾ.ಶಿವಮೂರ್ತಿ ಮುರುಘಾ ಶರಣರು ಪ್ರಶಸ್ತಿ ಪ್ರದಾನ ಮಾಡುವರು’ ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಪ್ರಶಸ್ತಿಯು ₹ 50 ಸಾವಿರ ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ. 10 ಜನ ಸಾಧಕರಿಗೆ ಈ ಹಿಂದೆ ಪ್ರಶಸ್ತಿ ನೀಡಲಾಗಿದೆ. ಮೊದಲ ಬಾರಿಗೆ ಮಹಿಳಾ ಸಾಧಕಿಗೆ ನೀಡಲಾಗುತ್ತಿದೆ.’ ಎಂದು ತಿಳಿಸಿದರು.