ಕಲಬುರ್ಗಿ: ‘ಸುಧಾ’ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರಘುನಾಥ ಚ.ಹ. ಅವರ ‘ಗೋರಿ’ ಕಥೆಗೆ ಗುಲಬರ್ಗಾ ವಿ.ವಿ. ಪ್ರಸಾರಾಂಗದ ದಿ.ಜಯತೀರ್ಥ ರಾಜಪುರೋಹಿತ ಸ್ಮಾರಕ ದತ್ತಿ ರಾಜ್ಯಮಟ್ಟದ ಕನ್ನಡ ಸಣ್ಣ ಕಥಾ ಸ್ಪರ್ಧೆಯಲ್ಲಿ ಚಿನ್ನದ ಪದಕ ದೊರಕಿದ್ದು, ಬುಧವಾರ ನಡೆದ ಸಮಾರಂಭದಲ್ಲಿ ಹಂಗಾಮಿ ಕುಲಪತಿ ಪ್ರೊ.ಚಂದ್ರಕಾಂತ ಯಾತನೂರ ಪ್ರಶಸ್ತಿ ಪ್ರದಾನ ಮಾಡಿದರು.