ಮಂಗಳವಾರ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಆಯನೂರು ಮಂಜುನಾಥ್, 'ಕೊರೊನಾ ಲಾಕ್ ಡೌನ್ ಅವಧಿಯಲ್ಲಿ ಅತಿಥಿ ಉಪನ್ಯಾಸಕರಿಗೆ ವೇತನ ಪಾವತಿಸುವಂತೆ ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸಿದೆ. ಆದರೆ, ರಾಜ್ಯದಲ್ಲಿ ಯಾವುದೇ ಅತಿಥಿ ಉಪನ್ಯಾಸಕರಿಗೆ ವೇತನ ಪಾವತಿಸಿಲ್ಲ.ಲಾಕ್ ಡೌನ್ ಆರಂಭದಲ್ಲೇ ಅತಿಥಿ ಉಪನ್ಯಾಸಕರನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿತ್ತು ಎಂದು ಶಿಕ್ಷಣ ಸಚಿವರು ಸದನಕ್ಕೆ ಸುಳ್ಳು ಹೇಳಿದ್ದಾರೆ' ಎಂದು ಆರೋಪಿಸಿದರು.