<p><strong>ಬೆಂಗಳೂರು: </strong>ಪ್ರವೇಶ ಪರೀಕ್ಷೆಗಳಿಗೆ ಹಾಜರಾಗದೆ ಪ್ರವೇಶ ಪಡೆದ 2017-18 ಸಾಲಿನ ಸ್ನಾತಕೋತ್ತರ ಆಯುರ್ವೇದ ವಿದ್ಯಾರ್ಥಿಗಳು ತಮ್ಮ ಕೋರ್ಸ್ ಮುಂದುವರಿಸಬಹುದು ಎಂದು ಹೈಕೋರ್ಟ್ ಹೇಳಿದೆ.</p>.<p>ಡಾ. ಸೊಂಟಕ್ಕೆ ಕಾಂಚನ ರಾಮರಾವ್ ಮತ್ತು ಇತರ ಮೂವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದಕುಮಾರ್ ನೇತೃತ್ವದ ವಿಭಾಗೀಯಪೀಠ, ಈ ಆದೇಶ ನೀಡಿತು.</p>.<p>‘ಪರೀಕ್ಷೆ ಮೂಲಕವೇ ಕೋರ್ಸ್ಗೆ ಪ್ರವೇಶ ಪಡೆಯಬೇಕು. ಆದರೆ, 2019ರ ಅಕ್ಟೋಬರ್ 31ಕ್ಕೂ ಮೊದಲು ಸ್ನಾತಕೋತ್ತರ ಕೋರ್ಸ್ಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಒಂದು ಬಾರಿಯ ಅವಕಾಶ ನೀಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಇದನ್ನು ಈ ವಿದ್ಯಾರ್ಥಿಗಳಿಗೂ ಅನ್ವಯಿಸಬಹುದು’ ಎಂದು ಪೀಠ ಹೇಳಿತು.</p>.<p>‘ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ನಿರ್ದಿಷ್ಟ ಪ್ರಕರಣಕ್ಕೆ ಸಂಬಂಧಿಸಿದ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತ. ಅದನ್ನು ಈ ಅರ್ಜಿದಾರರಿಗೆ ವಿಸ್ತರಿಸಲು ಆಗುವುದಿಲ್ಲ’ ಎಂದು ಸೆಂಟ್ರಲ್ ಕೌನ್ಸಿಲ್ ಆಫ್ ಇಂಡಿಯನ್ ಮೆಡಿಸಿನ್ ಪರ ವಕೀಲರು ವಾದಿಸಿದರು.</p>.<p>‘2019ಕ್ಕಿಂತ ಮೊದಲು ಪ್ರವೇಶ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೂ ಸುಪ್ರೀಂ ಕೋರ್ಟ್ ಆದೇಶ ಅನ್ವಯವಾಗುತ್ತದೆ. ಅರ್ಜಿದಾರರು ತಮ್ಮ ಕೋರ್ಸ್ಗಳು ಮುಂದುವರಿಸಲು ಅವಕಾಶ ನೀಡಬೇಕು. ಈಗಾಗಲೇ ಪೂರ್ಣಗೊಳಿಸಿದ್ದರೆ ಅವರಿಗೆ ಪ್ರಮಾಣ ಪತ್ರಗಳನ್ನು ವಿತರಿಸಬೇಕು’ ಎಂದು ಪೀಠ ನಿರ್ದೇಶನ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪ್ರವೇಶ ಪರೀಕ್ಷೆಗಳಿಗೆ ಹಾಜರಾಗದೆ ಪ್ರವೇಶ ಪಡೆದ 2017-18 ಸಾಲಿನ ಸ್ನಾತಕೋತ್ತರ ಆಯುರ್ವೇದ ವಿದ್ಯಾರ್ಥಿಗಳು ತಮ್ಮ ಕೋರ್ಸ್ ಮುಂದುವರಿಸಬಹುದು ಎಂದು ಹೈಕೋರ್ಟ್ ಹೇಳಿದೆ.</p>.<p>ಡಾ. ಸೊಂಟಕ್ಕೆ ಕಾಂಚನ ರಾಮರಾವ್ ಮತ್ತು ಇತರ ಮೂವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದಕುಮಾರ್ ನೇತೃತ್ವದ ವಿಭಾಗೀಯಪೀಠ, ಈ ಆದೇಶ ನೀಡಿತು.</p>.<p>‘ಪರೀಕ್ಷೆ ಮೂಲಕವೇ ಕೋರ್ಸ್ಗೆ ಪ್ರವೇಶ ಪಡೆಯಬೇಕು. ಆದರೆ, 2019ರ ಅಕ್ಟೋಬರ್ 31ಕ್ಕೂ ಮೊದಲು ಸ್ನಾತಕೋತ್ತರ ಕೋರ್ಸ್ಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಒಂದು ಬಾರಿಯ ಅವಕಾಶ ನೀಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಇದನ್ನು ಈ ವಿದ್ಯಾರ್ಥಿಗಳಿಗೂ ಅನ್ವಯಿಸಬಹುದು’ ಎಂದು ಪೀಠ ಹೇಳಿತು.</p>.<p>‘ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ನಿರ್ದಿಷ್ಟ ಪ್ರಕರಣಕ್ಕೆ ಸಂಬಂಧಿಸಿದ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತ. ಅದನ್ನು ಈ ಅರ್ಜಿದಾರರಿಗೆ ವಿಸ್ತರಿಸಲು ಆಗುವುದಿಲ್ಲ’ ಎಂದು ಸೆಂಟ್ರಲ್ ಕೌನ್ಸಿಲ್ ಆಫ್ ಇಂಡಿಯನ್ ಮೆಡಿಸಿನ್ ಪರ ವಕೀಲರು ವಾದಿಸಿದರು.</p>.<p>‘2019ಕ್ಕಿಂತ ಮೊದಲು ಪ್ರವೇಶ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೂ ಸುಪ್ರೀಂ ಕೋರ್ಟ್ ಆದೇಶ ಅನ್ವಯವಾಗುತ್ತದೆ. ಅರ್ಜಿದಾರರು ತಮ್ಮ ಕೋರ್ಸ್ಗಳು ಮುಂದುವರಿಸಲು ಅವಕಾಶ ನೀಡಬೇಕು. ಈಗಾಗಲೇ ಪೂರ್ಣಗೊಳಿಸಿದ್ದರೆ ಅವರಿಗೆ ಪ್ರಮಾಣ ಪತ್ರಗಳನ್ನು ವಿತರಿಸಬೇಕು’ ಎಂದು ಪೀಠ ನಿರ್ದೇಶನ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>