ಜೀವನಶೈಲಿಯಿಂದ ಸಮಸ್ಯೆ: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್, ‘ಜನರ ಅಪೇಕ್ಷೆ, ನಿರೀಕ್ಷೆ ಹಾಗೂ ಜೀವನಶೈಲಿ ಬದಲಾಗಿದೆ. ದೇಶದಲ್ಲಿ ಶೇ 50ರಷ್ಟು ಸಾವಿನ ಪ್ರಕರಣಗಳು ಜೀವನಶೈಲಿ ಬದಲಾವಣೆಗೆ ಸಂಬಂಧಿಸಿದ್ದಾಗಿವೆ. ಸಾಂಕ್ರಾಮಿಕವಲ್ಲದ ರೋಗಗಳಿಂದ ಮೃತಪಡುವವರ ಸಂಖ್ಯೆ ಕೂಡ ಹೆಚ್ಚಳವಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಔಷಧಗಳನ್ನು ಸಂಶೋಧಿಸಲಾಗುತ್ತಿದೆ. ಇದೇ ವೇಳೆ ಕಾಯಿಲೆಗಳು ಕೂಡ ಅಧಿಕವಾಗುತ್ತಿವೆ‘ ಎಂದರು.