ರಾಜ್ಯದಲ್ಲಿ ಸದ್ಯ ಆಯುಷ್ ಇಲಾಖೆಯಡಿ 840 ಆಯುಷ್ ವೈದ್ಯಾಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಕೋವಿಡ್ ಕಾಣಿಸಿಕೊಂಡ ಬಳಿಕ ಅವರನ್ನು ಕೋವಿಡ್ ಆರೈಕೆ ಕೇಂದ್ರ, ಟ್ರಯಾಜ್ ಸೆಂಟರ್, ವೈದ್ಯಕೀಯ ಆಮ್ಲಜನಕ ಕೇಂದ್ರ ಸೇರಿದಂತೆ ವಿವಿಧೆಡೆ ನಿಯೋಜಿಸಲಾಗಿದೆ. ವಿಶೇಷ ಭತ್ಯೆಗೆ ಸಂಬಂಧಿಸಿದಂತೆ ಸರ್ಕಾರ ಸ್ಪಂದಿಸದ ಕಾರಣ ಕಪ್ಪು ಪಟ್ಟಿ ಧರಿಸಿ, ಸೇವೆ ನೀಡಲಾರಂಭಿಸಿದ್ದಾರೆ. ಇದೇ 7ರೊಳಗೆ ಬೇಡಿಕೆ ಈಡೇರದಿದ್ದಲ್ಲಿ ಕೋವಿಡ್ ಕೆಲಸ ಕಾರ್ಯಗಳನ್ನು ಬಹಿಷ್ಕರಿಸಿ, ಮಾತೃ ಇಲಾಖೆಯ ಚಿಕಿತ್ಸಾಲಯ ಮತ್ತು ಆಸ್ಪತ್ರೆಗಳಿಗೆ ಸೀಮಿತವಾಗಿ ಕರ್ತವ್ಯ ನಿರ್ವಹಿಸಲು ಮುಂದಾಗಿದ್ದಾರೆ.