ಆಯುಷ್ಮಾನ್ ಭಾರತ್ ದಿನದ ಅಂಗವಾಗಿ ಶನಿವಾರ ನಡೆದ ‘ಆರೋಗ್ಯ ಮಂಥನ’ ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳ ಆರೋಗ್ಯಾಧಿಕಾರಿಗಳು, ವೈದ್ಯರು, ಸಿಬ್ಬಂದಿ ಮತ್ತು ಫಲಾನುಭವಿಗಳ ಜತೆ ಸಂವಾದ ನಡೆಸಿದ ಅವರು, ‘ಆಯುಷ್ಮಾನ್ ಯೋಜನೆಯ ಅನುಕೂಲಗಳನ್ನು ಪಡೆಯಲು ಎಲ್ಲರಿಗೂ ಅವಕಾಶವಾಗಬೇಕು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಕಾರ್ಡ್ಗಳ ನೋಂದಣಿಗೆ ವ್ಯವಸ್ಥೆ ಮಾಡಬೇಕು’ ಎಂದರು.