ದೆಹಲಿಯ ಕೃಷಿ ಭವನದಲ್ಲಿ ಬುಧವಾರ ಕೈಲಾಶ್ ಚೌಧರಿ ಅವರನ್ನು ಭೇಟಿಮಾಡಿದ ಸಚಿವ ಪಾಟೀಲ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ– ಡಬ್ಲ್ಯುಡಿಸಿ ಯೋಜನೆಯಡಿ ರಾಜ್ಯದಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸಲು ಜಲಾನಯನ ಅಭಿವೃದ್ಧಿಗೆ 53 ಲಕ್ಷ ಹೆಕ್ಟೇರ್ ಕೃಷಿ ಜಮೀನು ಲಭ್ಯವಿದೆ. ಪ್ರತಿ ವರ್ಷ ಐದು ಲಕ್ಷ ಎಕರೆ ಜಮೀನಿನಲ್ಲಿ ಜಲಾನಯನ ಅಭಿವೃದ್ಧಿ ಯೋಜನೆ ಅನುಷ್ಠಾನಕ್ಕೆ ಅನುದಾನ ಒದಗಿಸಬೇಕು ಎಂದು ಮನವಿ ಮಾಡಿದರು.