ಈ ಕುರಿತು ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಕಾಯ್ದೆಗಳ ಕುರಿತು ಪರಿಶೀಲನೆಗೆ ಸಮಿತಿ ನೇಮಿಸುವ ಸುಪ್ರೀಂಕೋರ್ಟ್ ನಿರ್ಧಾರ ಸ್ವಾಗತಾರ್ಹವಾದುದು. ಆದರೆ, ಸೂಕ್ಷ್ಮತೆಯುಳ್ಳ ಯಾರೂ ಈ ಸಮಿತಿಯ ಎದುರು ಹಾಜರಾಗಿ ತಮ್ಮ ಅಭಿಪ್ರಾಯವನ್ನು ಮಂಡಿಸುವುದು ಕಷ್ಟ. ಕೇಂದ್ರ ಸರ್ಕಾರ ತಂದಿರುವ ತಿದ್ದುಪಡಿ, ಕಾಯ್ದೆಗಳನ್ನು ಬಹಿರಂಗವಾಗಿ ಸಮರ್ಥಿಸಿಕೊಂಡಿರುವವರನ್ನೇ ಸಮಿತಿಯ ಸದಸ್ಯರನ್ನಾಗಿ ಮಾಡಿರುವುದು ಇದಕ್ಕೆ ಕಾರಣ’ ಎಂದು ಹೇಳಿದ್ದಾರೆ.