ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಪಕ್ಷ ವೋಟ್‌ ಬ್ಯಾಂಕ್‌ ರಾಜಕಾರಣ ಮುಂದುವರೆಸಿದೆ: ಬಿ.ಎಲ್‌. ಸಂತೋಷ್‌

Last Updated 14 ಆಗಸ್ಟ್ 2020, 6:34 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್‌ ಪಕ್ಷವು ಓಲೈಕೆ ಮತ್ತು ವೋಟ್‌ ಬ್ಯಾಂಕ್‌ ರಾಜಕಾರಣವನ್ನು ಮುಂದುವರೆಸಿದೆ ಎಂದು ಬಿಜೆಪಿ ಮುಖಂಡ ಬಿ.ಎಲ್‌.ಸಂತೋಷ್ ಟೀಕಿಸಿದ್ದಾರೆ.

ಈ ಬಗ್ಗೆ ಶುಕ್ರವಾರ ಬೆಳಿಗ್ಗೆ ಟ್ವೀಟ್‌ ಮಾಡಿರುವ ಅವರು, 'ಗಲಭೆಗಳನ್ನು ಖಂಡಿಸುವುದಿಲ್ಲ. ದಲಿತ ಶಾಸಕರ ಮನೆಯ ಮೇಲೆ ನಡೆದ ದಾಳಿಯನ್ನು ಖಂಡಿಸುವುದಿಲ್ಲ. ಶೃಂಗೇರಿಯಲ್ಲಿ ಆದಿ ಶಂಕರಾಚಾರ್ಯ ಪ್ರತಿಮೆಯನ್ನು ಅಪವಿತ್ರಗೊಳಿಸುವುದನ್ನು ಖಂಡಿಸುವುದಿಲ್ಲ. ಕಾಂಗ್ರೆಸ್‌ ಪಕ್ಷವು ತನ್ನ ಹಳೆಯ ಅಭ್ಯಾಸವಾಗಿರುವ ಓಲೈಕೆ ಮತ್ತು ವೋಟ್‌ ಬ್ಯಾಂಕ್‌ ರಾಜಕಾರಣ ಮುಂದೆವರೆಸಿದೆ' ಎಂದು ಅವರು ಟ್ವೀಟ್‌ ಮಾಡಿದ್ದಾರೆ.

'ಕಾಂಗ್ರೆಸ್‌ ಕಾರ್ಪೋರೇಟರ್‌ ಪತಿ ಕಲೀಮ್‌ ಪಾಷಾ ಅವರನ್ನು ಬಂಧಿಸಲಾಗಿದೆ. ಎಸ್‌ಡಿಪಿಐನ ನಾಲ್ವರು ಹಿರಿಯ ಕಾರ್ಯಕರ್ತರನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೂ ರಾಜ್ಯ ಕಾಂಗ್ರೆಸ್‌ ನಾಯಕರು ಆಪಾದನೆಯನ್ನು ಬೇರೆಡೆಗೆ ತಿರುಗಿಸಿಲು ಪ್ರಯತ್ನಿಸುತ್ತಿದ್ದಾರೆ. ಅವರು ಗಲಭೆಗಳನ್ನು ಖಂಡಿಸುವುದಿಲ್ಲ. ಮುಂಬರುವ ಬಿಬಿಎಂಪಿ ಚುನಾವಣೆಯ ಮೇಲೆ ಮಾತ್ರ ಅವರ ಕಣ್ಣುಗಳಿವೆ' ಎಂದು ಸಂತೋಷ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT