ವಿಜಯಪುರ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಡ್ರಗ್ಸ್ ಪೆಡ್ಲರ್ ಎಂದಿರುವುದು ಸರಿಯಲ್ಲ. ಆ ರೀತಿ ಅಗೌರವದಿಂದ ಮಾತನಾಡಿರುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸಿಂದಗಿ ತಾಲ್ಲೂಕಿನ ಮೊರಟಗಿ ಯಲ್ಲಿ ಬುಧವಾರ ಸುದ್ದಿಗಾರರ ಪ್ರಶ್ನಿಗೆ ಉತ್ತರಿಸಿದ ಅವರು,ಯಾರೂ ಯಾರ ಬಗ್ಗೆಯೂ ಈ ರೀತಿ ಅಗೌರವದಿಂದ ಮಾತನಾಡಬಾರದು ಎಂದರು. ರಾಹುಲ್ ಗಾಂಧಿ ಬಗ್ಗೆ ಗೌರವ ಇದೆ ಎಂದು ಹೇಳಿದರು.
ಎಚ್.ಡಿ.ಕುಮಾರ ಸ್ವಾಮಿ, ಸಿದ್ದರಾಮಯ್ಯ ಅವರು ಅನಗತ್ಯವಾಗಿ ಆರ್ ಎಸ್ ಎಸ್ ಅನ್ನು ಎಳೆದು ತರುವುದರಿಂದ ಅವರಿಗೆ ಯಾವುದೇ ಲಾಭವಿಲ್ಲ ಎಂದರು.