ಸಚಿವ ಸಂಪುಟ ವಿಸ್ತರಣೆ ಕುರಿತು, ‘ಬಿಜೆಪಿ ಸರ್ಕಾರ ರಚನೆಗಾಗಿ ತ್ಯಾಗ ಮಾಡಿದವರಿಗೆ ಸಚಿವ ಸ್ಥಾನ ನೀಡುವುದು ನಮ್ಮ ಕರ್ತವ್ಯ. ಅದನ್ನು ಖಂಡಿತ ನೆರವೇರಿಸುತ್ತೇವೆ. ಆದರೆ, ಗ್ರಾಮ ಪಂಚಾಯಿತಿ ಚುನಾವಣೆ, ಉಪಚುನಾವಣೆ ನಡೆಯಲಿದ್ದು, ಕೇಂದ್ರದ ನಾಯಕರು ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ. ಅವರ ಒಪ್ಪಿಗೆಗಾಗಿ ಕಾಯುತ್ತಿದ್ದೇವೆ’ ಎಂದು ಹೇಳಿದರು.