ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿ ರಾಜಕಾರಣ ತೊಲಗಬೇಕು : ಮಂತ್ರಾಲಯ ಸ್ವಾಮೀಜಿ

Last Updated 7 ಫೆಬ್ರುವರಿ 2023, 13:59 IST
ಅಕ್ಷರ ಗಾತ್ರ

ಬಾಗಲಕೋಟೆ: ಭಾರತ ಜಾತ್ಯತೀತ ದೇಶವಾಗಿದೆ. ಜಾತಿ ರಾಜಕಾರಣ ತೊಲಗಬೇಕು. ಇಂತಹವರೇ ಪ್ರಮುಖ ಹುದ್ದೆ ಅಲಂಕರಿಸಬೇಕು ಎಂದು ಸಂವಿಧಾನದಲ್ಲಿ ಯಾವುದೇ ನಿರ್ಬಂಧ ಇಲ್ಲ. ಅಂಬೇಡ್ಕರ್ ಅವರು ಎಲ್ಲ ಜನಾಂಗಕ್ಕೂ ಸರಿಯಾದ ಅವಕಾಶ ನೀಡಿದ್ದಾರೆ ಎಂದು ಮಂತ್ರಾಲಯದ ಸುಬುಧೇಂದ್ರತೀರ್ಥ ಸ್ವಾಮೀಜಿ ಹೇಳಿದರು.

ಮಂಗಳವಾರ ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಾಹ್ಮಣ ಸಮುದಾಯ ಇನ್ನೊಂದು ಸಮಾಜದ ವಿರೋಧಿಯಲ್ಲ. ಎಲ್ಲರ ಕ್ಷೇಮ ಕೋರುವ ಸಮಾಜವಾಗಿದೆ ಎಂದರು.

ಒಂದು ಸಮುದಾಯದವರು ಯಾವುದೇ ಮುಖ್ಯ ಪದವಿ ಅಲಂಕರಿಸಬಾರದು. ಅದರಿಂದ ತೊಂದರೆಯಾಗುತ್ತದೆ ಎಂಬ ಹೇಳಿಕೆ ಸಂವಿಧಾನ ವಿರೋಧಿಯಾಗಿದೆ. ಬ್ರಾಹ್ಮಣ ಸಮುದಾಯವನ್ನು ಯಾರೇ ನಿಂದಿಸಿದರೂ ಖಂಡಿಸುತ್ತೇವೆ. ಯಾರೇ ಆಗಲಿ, ಯಾವ ಸಮುದಾಯವನ್ನೂ ತೆಗಳಬಾರದು ಎಂದು ಸಲಹೆ ನೀಡಿದರು.

ಯಾರು ಮುಖ್ಯಮಂತ್ರಿಯಾಗಬೇಕು ಎಂಬುದನ್ನು ಜನರು, ಪಕ್ಷಗಳು ನಿರ್ಧರಿಸುತ್ತವೆ. ಒಬ್ಬ ವ್ಯಕ್ತಿ ಇಂತಹವರು ಮುಖ್ಯಮಂತ್ರಿಯಾಗಬಾರದು ಎಂದು ಹೇಳುವುದು ಸರಿಯಲ್ಲ. ಹಾಗೆ ಹೇಳುವುದು ಪ್ರಜಾಪ್ರಭುತ್ವ ಆಗಲ್ಲ, ನಿರಂಕುಶವಾಗುತ್ತದೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಹಿಂದುತ್ವ ವಿರೋಧಿಸುವುದು ಅರ್ಥಹೀನವಾಗಿದೆ. ಸಿದ್ದರಾಮಯ್ಯ ಅವರು ಹಿಂದೂ ಎನ್ನುತ್ತಾರೆ. ಆದರೆ, ಹಿಂದುತ್ವ ಒಪ್ಪುವುದಿಲ್ಲ. ತಾಯಿ ಅನ್ನೋದು, ನಂತರ ಟೀಕಿಸುವುದು ಅಪಹಾಸ್ಯವಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT