‘ದೇಶದಲ್ಲೇ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಿದ ರಾಜ್ಯ ಕರ್ನಾಟಕ. ಈಗ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನದಿಂದ ಹಿಂದುಳಿದ ವರ್ಗಗಳು ಹೊಂದಿರುವ ಶೇಕಡ 28ರಷ್ಟು ರಾಜಕೀಯ ಮೀಸಲಾತಿಗೆ ಕಂಟಕ ಎದುರಾಗಿದೆ. ನ್ಯಾಯಾಲಯದ ನಿರ್ದೇಶನದಂತೆ ಪರಾಮರ್ಶೆ ನಡೆಸಲು ಜಾತಿ ಗಣತಿ ವರದಿಯನ್ನು ಬಳಸಿಕೊಳ್ಳಬೇಕು. ಆ ಮೂಲಕ ಮೀಸಲಾತಿ ಸೌಲಭ್ಯವನ್ನು ರಕ್ಷಿಸಬೇಕು’ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಣ್ಣೆಗೆರೆ ಆರ್. ವೆಂಕಟರಾಮಯ್ಯ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.