‘ಶನಿವಾರ ರಾತ್ರಿ ಹನುಮಾನ ದೇವರ ಪಲ್ಲಕ್ಕಿ ಉತ್ಸವ ಮುಗಿಸಿ ಸಹೋದರನ ಪುತ್ರ ಸುಮೇದ್ ಜತೆ ದ್ವಿಚಕ್ರ ವಾಹನದಲ್ಲಿ ಭುಜಬಲಿ ಹೋಗಲು ಸಿದ್ಧರಾಗಿದ್ದಾಗ ಖಾರದಪುಡಿ ಎರಚಲಾಗಿದೆ.ಆಗ ಸುಮೇದ್ ಓಡಿ ಹೋಗಿದ್ದಾರೆ. ಆನಂತರ ಭುಜಬಲಿಯನ್ನು ಕಬ್ಬು ಕಟಾವಿಗೆ ಬಳಸುವ ಹರಿತವಾದ ವಸ್ತುವಿನಿಂದ ಇರಿದು ಕೊಲೆ ಮಾಡಲಾಗಿದೆ’ ಎಂದು ಸಾವಳಗಿ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಆರೋಪಿ ತಮ್ಮನಗೌಡ ಪಾಟೀಲ ಅವರನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಇನ್ಸ್ಪೆಕ್ಟರ್ ಮನೋಹರ ಕಂಚಗಾರ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.