<p><strong>ಬೆಂಗಳೂರು:</strong> ಬಗರ್ಹುಕುಂ ಸಾಗುವಳಿಯ ಭೂಮಿ ಸಕ್ರಮಗೊಳಿಸುವ ತಂತ್ರಾಂಶಕ್ಕೆ ಅಪ್ಲೋಡ್ ಆಗದೇ ಇರುವ 4.83 ಲಕ್ಷ ಅರ್ಜಿಗಳನ್ನು ಜುಲೈ 31 ರೊಳಗೆ ಅಪ್ಲೋಡ್ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ಅವರು ಹೇಳಿದ್ದಾರೆ.</p>.<p>ಇದರಿಂದ ಅರ್ಜಿ ಸಲ್ಲಿಸಿರುವ ಅರ್ಹ ರೈತರ ಜಮೀನು ಸಕ್ರಮಕ್ಕೆ ಅನುಕೂಲವಾಗಲಿದೆ ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಸರ್ಕಾರಿ ಜಮೀನಿನಲ್ಲಿ 2005 ಜನವರಿ 1 ಕ್ಕೂ ಮೊದಲು ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು, ಸಣ್ಣ ರೈತರ ಜಮೀನುಗಳನ್ನು ಸಕ್ರಮಗೊಳಿಸಲು ಅರ್ಜಿಗಳನ್ನು ಅಪ್ಲೋಡ್ ಮಾಡಲು ಮತ್ತೆ ಅವಕಾಶ ನೀಡಲಾಗಿದೆ ಎಂದು ಅಶೋಕ ಹೇಳಿದರು.</p>.<p><strong>ಮನೆಗಳ ಸಕ್ರಮ ಅವಧಿ ವಿಸ್ತರಣೆ</strong></p>.<p>ಗ್ರಾಮಾಂತರ ಮತ್ತು ನಗರ ಪ್ರದೇಶಗಳ ಸರ್ಕಾರಿ ಜಮೀನುಗಳಲ್ಲಿ 2015 ರ ಜನವರಿ 1 ಕ್ಕೆ ಮೊದಲು ಅನಧಿಕೃತವಾಗಿ ನಿರ್ಮಿಸಿರುವ ವಾಸದ ಮನೆಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು 2022 ರ ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ.</p>.<p>ಸಕ್ರಮಕ್ಕಾಗಿ ಭೂಕಂದಾಯ ಕಾಯ್ದೆಯ 94 ಸಿ ಮತ್ತು 94 ಸಿಸಿ ಅಡಿ ಅವಕಾಶ ಕಲ್ಪಿಸಲಾಗಿತ್ತು. ಈ ಹಿಂದೆ ನೀಡಿದ್ದ ಕಾಲಾವಕಾಶ ಮುಗಿದಿದ್ದರೂ ಕಂದಾಯ ನಿಯಮ 108 ಕ್ಯೂ ಮತ್ತು 108 ಎಕ್ಸ್ಗೆ ತಿದ್ದುಪಡಿ ಮಾಡುವ ಮೂಲಕ ಹೆಚ್ಚಿನ ಕಾಲಾವಕಾಶ ನೀಡಲಾಗಿದೆ. ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ 2023 ರ ಮಾರ್ಚ್ 31 ರೊಳಗೆ ಹಕ್ಕು ಪತ್ರ ನೀಡಲಾಗುವುದು ಎಂದು ಅಶೋಕ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಗರ್ಹುಕುಂ ಸಾಗುವಳಿಯ ಭೂಮಿ ಸಕ್ರಮಗೊಳಿಸುವ ತಂತ್ರಾಂಶಕ್ಕೆ ಅಪ್ಲೋಡ್ ಆಗದೇ ಇರುವ 4.83 ಲಕ್ಷ ಅರ್ಜಿಗಳನ್ನು ಜುಲೈ 31 ರೊಳಗೆ ಅಪ್ಲೋಡ್ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ಅವರು ಹೇಳಿದ್ದಾರೆ.</p>.<p>ಇದರಿಂದ ಅರ್ಜಿ ಸಲ್ಲಿಸಿರುವ ಅರ್ಹ ರೈತರ ಜಮೀನು ಸಕ್ರಮಕ್ಕೆ ಅನುಕೂಲವಾಗಲಿದೆ ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಸರ್ಕಾರಿ ಜಮೀನಿನಲ್ಲಿ 2005 ಜನವರಿ 1 ಕ್ಕೂ ಮೊದಲು ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು, ಸಣ್ಣ ರೈತರ ಜಮೀನುಗಳನ್ನು ಸಕ್ರಮಗೊಳಿಸಲು ಅರ್ಜಿಗಳನ್ನು ಅಪ್ಲೋಡ್ ಮಾಡಲು ಮತ್ತೆ ಅವಕಾಶ ನೀಡಲಾಗಿದೆ ಎಂದು ಅಶೋಕ ಹೇಳಿದರು.</p>.<p><strong>ಮನೆಗಳ ಸಕ್ರಮ ಅವಧಿ ವಿಸ್ತರಣೆ</strong></p>.<p>ಗ್ರಾಮಾಂತರ ಮತ್ತು ನಗರ ಪ್ರದೇಶಗಳ ಸರ್ಕಾರಿ ಜಮೀನುಗಳಲ್ಲಿ 2015 ರ ಜನವರಿ 1 ಕ್ಕೆ ಮೊದಲು ಅನಧಿಕೃತವಾಗಿ ನಿರ್ಮಿಸಿರುವ ವಾಸದ ಮನೆಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು 2022 ರ ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ.</p>.<p>ಸಕ್ರಮಕ್ಕಾಗಿ ಭೂಕಂದಾಯ ಕಾಯ್ದೆಯ 94 ಸಿ ಮತ್ತು 94 ಸಿಸಿ ಅಡಿ ಅವಕಾಶ ಕಲ್ಪಿಸಲಾಗಿತ್ತು. ಈ ಹಿಂದೆ ನೀಡಿದ್ದ ಕಾಲಾವಕಾಶ ಮುಗಿದಿದ್ದರೂ ಕಂದಾಯ ನಿಯಮ 108 ಕ್ಯೂ ಮತ್ತು 108 ಎಕ್ಸ್ಗೆ ತಿದ್ದುಪಡಿ ಮಾಡುವ ಮೂಲಕ ಹೆಚ್ಚಿನ ಕಾಲಾವಕಾಶ ನೀಡಲಾಗಿದೆ. ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ 2023 ರ ಮಾರ್ಚ್ 31 ರೊಳಗೆ ಹಕ್ಕು ಪತ್ರ ನೀಡಲಾಗುವುದು ಎಂದು ಅಶೋಕ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>