‘ಇತ್ತೀಚೆಗಷ್ಟೇ ಪತಿಯನ್ನು ಕಳೆದು ಕೊಂಡಿರುವ ಸಂತ್ರಸ್ತ ರೈತ ಮಹಿಳೆ ಗಂಗಮ್ಮ ಈಗ ಭೂಮಿಯನ್ನೂ ಕಳೆದು
ಕೊಂಡು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಅವರಿಗೆ ನೆರವು ನೀಡುವ ಅಗತ್ಯವಿದೆ’ ಎಂದು ಮಧು ಬಂಗಾರಪ್ಪ ಅವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವರಲ್ಲಿ ಮನವಿ ಮಾಡಿದರು. ಸ್ಥಳದಲ್ಲಿಯೇ ₹ 1.50 ಲಕ್ಷ ಸಂಗ್ರಹವಾಯಿತು. ಅದಕ್ಕೆ ಮಧು ಬಂಗಾರಪ್ಪ ಅವರೂ ವೈಯಕ್ತಿಕ ವಾಗಿ ₹ 1 ಲಕ್ಷ ಸೇರಿಸಿ ಒಟ್ಟು ₹ 2.50 ಲಕ್ಷ ಧನಸಹಾಯ ಮಾಡಿದರು.