<p><strong>ಸೊರಬ</strong>: ತಾಲ್ಲೂಕಿನ ತಾಳಗುಪ್ಪ ಗ್ರಾಮದ 6 ಜನ ರೈತರು ಬಗರ್ಹುಕುಂ ಭೂಮಿಯಲ್ಲಿ ಬೆಳೆಸಿದ್ದ ಅಡಿಕೆ ತೋಟ<br />ವನ್ನು ಶಾಸಕ ಕುಮಾರ್ ಬಂಗಾರಪ್ಪ ಕುಮ್ಮಕ್ಕಿನಿಂದ ತೆರವುಗೊಳಿಸಲಾಗಿದೆ ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮಧು ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದರು.</p>.<p>ರೈತರ ಬಗರ್ಹುಕುಂ ಜಮೀನನ್ನು ಅರಣ್ಯ ಇಲಾಖೆ ತೆರವುಗೊಳಿಸಿರುವುದನ್ನು ವಿರೋಧಿಸಿ ಪಟ್ಟಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಮರೆವಣಿಗೆ ಉದ್ದೇಶಿಸಿ ಅವರು ಮಾತನಾಡಿದರು.</p>.<p>6 ಜನ ರೈತರು 27 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಅಡಿಕೆ ತೋಟವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶಾಸಕರ ಕುಮ್ಮಕ್ಕಿನಿಂದಾಗಿ ನಾಶಪಡಿಸಿದ್ದಾರೆ. ಬಡ ರೈತರು ಬೀದಿಗೆ ಬರಲು ಶಾಸಕರೇ ನೇರ ಕಾರಣ. ಚುನಾವಣೆಯಲ್ಲಿ ಅವರಿಗೆ ತಕ್ಕ ಪಾಠ ಕಲಿಸುವ ಮೂಲಕ ರೈತರು ಸೇಡು ತೀರಿಸಿಕೊಳ್ಳಬೇಕು ಎಂದರು.</p>.<p>11 ವರ್ಷಗಳ ಹಿಂದೆಯೂ ತಾಳಗುಪ್ಪದಲ್ಲಿ ರೈತರ ಬಗರ್ಹುಕುಂ ಜಮೀನು ತೆರವಿಗೆ ಸರ್ಕಾರ ಮುಂದಾಗಿತ್ತು. ಅಂದು ರೈತರಿಗೆ ಬೆಂಬಲವಾಗಿ ನಿಂತು ಶಿವಮೊಗ್ಗದವರೆಗೆ ಪಾದಯಾತ್ರೆ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿತ್ತು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮತ್ತೆ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲಾಗಿದೆ ಎಂದು ಅವರು ಆರೋಪಿಸಿದರು.</p>.<p>‘ಇತ್ತೀಚೆಗಷ್ಟೇ ಪತಿಯನ್ನು ಕಳೆದು ಕೊಂಡಿರುವ ಸಂತ್ರಸ್ತ ರೈತ ಮಹಿಳೆ ಗಂಗಮ್ಮ ಈಗ ಭೂಮಿಯನ್ನೂ ಕಳೆದು<br />ಕೊಂಡು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಅವರಿಗೆ ನೆರವು ನೀಡುವ ಅಗತ್ಯವಿದೆ’ ಎಂದು ಮಧು ಬಂಗಾರಪ್ಪ ಅವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವರಲ್ಲಿ ಮನವಿ ಮಾಡಿದರು. ಸ್ಥಳದಲ್ಲಿಯೇ ₹ 1.50 ಲಕ್ಷ ಸಂಗ್ರಹವಾಯಿತು. ಅದಕ್ಕೆ ಮಧು ಬಂಗಾರಪ್ಪ ಅವರೂ ವೈಯಕ್ತಿಕ ವಾಗಿ ₹ 1 ಲಕ್ಷ ಸೇರಿಸಿ ಒಟ್ಟು ₹ 2.50 ಲಕ್ಷ ಧನಸಹಾಯ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೊರಬ</strong>: ತಾಲ್ಲೂಕಿನ ತಾಳಗುಪ್ಪ ಗ್ರಾಮದ 6 ಜನ ರೈತರು ಬಗರ್ಹುಕುಂ ಭೂಮಿಯಲ್ಲಿ ಬೆಳೆಸಿದ್ದ ಅಡಿಕೆ ತೋಟ<br />ವನ್ನು ಶಾಸಕ ಕುಮಾರ್ ಬಂಗಾರಪ್ಪ ಕುಮ್ಮಕ್ಕಿನಿಂದ ತೆರವುಗೊಳಿಸಲಾಗಿದೆ ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮಧು ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದರು.</p>.<p>ರೈತರ ಬಗರ್ಹುಕುಂ ಜಮೀನನ್ನು ಅರಣ್ಯ ಇಲಾಖೆ ತೆರವುಗೊಳಿಸಿರುವುದನ್ನು ವಿರೋಧಿಸಿ ಪಟ್ಟಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಮರೆವಣಿಗೆ ಉದ್ದೇಶಿಸಿ ಅವರು ಮಾತನಾಡಿದರು.</p>.<p>6 ಜನ ರೈತರು 27 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಅಡಿಕೆ ತೋಟವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶಾಸಕರ ಕುಮ್ಮಕ್ಕಿನಿಂದಾಗಿ ನಾಶಪಡಿಸಿದ್ದಾರೆ. ಬಡ ರೈತರು ಬೀದಿಗೆ ಬರಲು ಶಾಸಕರೇ ನೇರ ಕಾರಣ. ಚುನಾವಣೆಯಲ್ಲಿ ಅವರಿಗೆ ತಕ್ಕ ಪಾಠ ಕಲಿಸುವ ಮೂಲಕ ರೈತರು ಸೇಡು ತೀರಿಸಿಕೊಳ್ಳಬೇಕು ಎಂದರು.</p>.<p>11 ವರ್ಷಗಳ ಹಿಂದೆಯೂ ತಾಳಗುಪ್ಪದಲ್ಲಿ ರೈತರ ಬಗರ್ಹುಕುಂ ಜಮೀನು ತೆರವಿಗೆ ಸರ್ಕಾರ ಮುಂದಾಗಿತ್ತು. ಅಂದು ರೈತರಿಗೆ ಬೆಂಬಲವಾಗಿ ನಿಂತು ಶಿವಮೊಗ್ಗದವರೆಗೆ ಪಾದಯಾತ್ರೆ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿತ್ತು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮತ್ತೆ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲಾಗಿದೆ ಎಂದು ಅವರು ಆರೋಪಿಸಿದರು.</p>.<p>‘ಇತ್ತೀಚೆಗಷ್ಟೇ ಪತಿಯನ್ನು ಕಳೆದು ಕೊಂಡಿರುವ ಸಂತ್ರಸ್ತ ರೈತ ಮಹಿಳೆ ಗಂಗಮ್ಮ ಈಗ ಭೂಮಿಯನ್ನೂ ಕಳೆದು<br />ಕೊಂಡು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಅವರಿಗೆ ನೆರವು ನೀಡುವ ಅಗತ್ಯವಿದೆ’ ಎಂದು ಮಧು ಬಂಗಾರಪ್ಪ ಅವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವರಲ್ಲಿ ಮನವಿ ಮಾಡಿದರು. ಸ್ಥಳದಲ್ಲಿಯೇ ₹ 1.50 ಲಕ್ಷ ಸಂಗ್ರಹವಾಯಿತು. ಅದಕ್ಕೆ ಮಧು ಬಂಗಾರಪ್ಪ ಅವರೂ ವೈಯಕ್ತಿಕ ವಾಗಿ ₹ 1 ಲಕ್ಷ ಸೇರಿಸಿ ಒಟ್ಟು ₹ 2.50 ಲಕ್ಷ ಧನಸಹಾಯ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>