ಕೊಲೆ ಪ್ರಕರಣದಲ್ಲಿ ಸಿಬಿಐ ವಿನಯ ಅವರನ್ನು ಬಂಧಿಸಿತ್ತು. 2021ರ ಆಗಸ್ಟ್ 11ರಂದು ಜಾಮೀನು ಮಂಜೂರು ಮಾಡಿದ್ದ ಸುಪ್ರೀಂಕೋರ್ಟ್, ಷರತ್ತುಗಳನ್ನು ವಿಧಿಸಿ, ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿತ್ತು. ಆ.13ರಂದು ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಿದ್ದ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ‘ಆರೋಪಿಯು ಈ ನ್ಯಾಯಾಲಯದ ಅನುಮತಿ ಇಲ್ಲದೇ ನ್ಯಾಯಾಲಯದ ವ್ಯಾಪ್ತಿಯನ್ನು ಬಿಟ್ಟು ಹೊರ ಹೋಗುವಂತಿಲ್ಲ’ ಎಂಬ ಷರತ್ತು ವಿಧಿಸಿತ್ತು.