ಶಿವಮೊಗ್ಗದ ಹರ್ಷನ ಮನೆಗೆ ಶನಿವಾರ ಭೇಟಿ ನೀಡಿದಾಗ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಾವು ಕೇವಲ ಕುಟುಂಬಕ್ಕೆ ದುಃಖ ತಂದಿಲ್ಲ; ಬದಲಿಗೆ ಇಡೀ ದೇಶಕ್ಕೆ ನೋವು ತಂದಿದೆ. ಹರ್ಷನ ಸಾವಿನ ಹಿಂದೆ ಅಂತರರಾಷ್ಟ್ರೀಯ ಷಡ್ಯಂತ್ರ ಅಡಗಿದೆ ಎಂಬ ಶಂಕೆ ಇದೆ. ಕೇಂದ್ರ ಸರ್ಕಾರ ಈ ಪ್ರಕರಣವನ್ನು ಎನ್ಐಎಗೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ಹೇಳಿದೆ. ಹಾಗಾಗಿ ಒಂದು ವಾರದೊಳಗೆ ಎನ್ಐಎಗೆ ಈ ಪ್ರಕರಣ ಹಸ್ತಾಂತರಗೊಳ್ಳುವ ನಿರೀಕ್ಷೆ ಇದೆ’ ಎಂದರು.