‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಮ್ಮನ್ನು ತಾವೇ ವಿಜೃಂಭಿಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ. ನನ್ನನ್ನು ಬಂಧಿಸಿ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ. ಡಿಕೆಶಿಯವರೇ ಇದೇನಿದು, ಸಹಾನುಭೂತಿ ಗಿಟ್ಟಿಸಿಕೊಳ್ಳುವ ಹೊಸ ತಂತ್ರವೇ? ಅಥವಾ ಜೈಲು ಹಕ್ಕಿಯ ಅನುಭವ ಇದೆ ಎಂಬ ಕಾರಣಕ್ಕಾಗಿ ಬಂಧಿಸಿ, ಬಂಧಿಸಿ ಎನ್ನುತ್ತಿದ್ದೀರಾ?’ ಎಂದು ಬಿಜೆಪಿ ಟ್ವೀಟ್ ಮಾಡಿದೆ.