<p><strong>ಬೆಂಗಳೂರು</strong>: ‘ಕೋಟ್ಯಂತರ ಜನರಿಗೆ ಅನ್ನ, ಅಕ್ಷರ ಮತ್ತು ಆಶ್ರಯ ನೀಡುವ ಮೂಲಕ ಅವುಗಳ ಮಹತ್ವವನ್ನುವಿಶ್ವಕ್ಕೆ ಸಾರಿದ ಬಾಲಗಂಗಾಧರನಾಥ ಸ್ವಾಮೀಜಿ ಹಾಗೂ ಶಿವಕುಮಾರ ಸ್ವಾಮೀಜಿ ಸಮಾಜದ ಎರಡು ಕಣ್ಣುಗಳು ಇದ್ದಂತೆ’ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.</p>.<p>ವಿ.ಸೋಮಣ್ಣ ಪ್ರತಿಷ್ಠಾನದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಬಾಲಗಂಗಾಧರನಾಥ ಸ್ವಾಮಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಬಾಲಗಂಗಾಧರನಾಥ ಸ್ವಾಮೀಜಿ ನನ್ನ ಜೀವನಕ್ಕೆ ಶಕ್ತಿ ತುಂಬಿ, ಇಂದು ಸಚಿವನಾಗಿ ಸಮಾಜ ಸೇವೆ ಮಾಡಲು ಪ್ರೇರಣೆ ನೀಡಿದರು. 29 ವರ್ಷಗಳಿಂದ ಪಾಳು ಬಿದ್ದ ಜಾಗವನ್ನು ಸುಂದರವಾದ ಬಿ.ಜಿ.ಎಸ್.ಕ್ರೀಡಾಂಗಣ ಮಾಡಲು ಅವರ ಆಶೀರ್ವಾದವೇ ಕಾರಣ’ ಎಂದರು.</p>.<p>‘ಅವರ ಮಾರ್ಗದರ್ಶನದಿಂದ ದೀಪಾಂಜಲಿ ನಗರದ ಕೊಳೆಗೇರಿ ಅಭಿವೃದ್ಧಿ, ಬಾಳಯ್ಯನ ಕೆರೆ ಸಂರಕ್ಷಣೆ ಹಾಗೂ 2 ಕೋಟಿ ಸಸಿ ನೆಡುವ ಕಾರ್ಯಗಳು ಯಶಸ್ವಿಯಾದವು’ ಎಂದು ಹೇಳಿದರು.</p>.<p>ಬೇಲಿಮಠದ ಶಿವರುದ್ರ ಸ್ವಾಮೀಜಿ,‘ಗುರುಗಳ ಬಳಿ ಸೇವಾ ಮನೋಭಾವದಿಂದ ಸಮರ್ಪಣೆ ಮಾಡಿದವರಿಗೆ ಅವರ ಸಂಪೂರ್ಣ ಆಶೀರ್ವಾದ ಲಭಿಸುತ್ತದೆ. ನಾನು ಎಂಬುದನ್ನು ಬಿಟ್ಟರೆ ಸಮಾಜದ ಅಭಿವೃದ್ದಿ ಸಾಧ್ಯ’ ಎಂದರು.</p>.<p>ಆದಿಚುಂಚನಗಿರಿ ವಿಜಯನಗರ ಶಾಖಾ ಮಠದ ಸೌಮ್ಯನಾಥ ಸ್ವಾಮೀಜಿ,‘ಸಮಾಜ ಸುಧಾರಣೆ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವಬಾಲಗಂಗಾಧರನಾಥ ಸ್ವಾಮೀಜಿ ಜಾತಿ, ಮತಗಳನ್ನು ನೋಡದೆ ಸಮಾಜಕ್ಕೆ ಸೇವೆ ಸಲ್ಲಿಸಿದವರನ್ನು ಗುರುತಿಸಿ ಪ್ರೋತ್ಸಾಹಿಸುತ್ತಿದ್ದರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕೋಟ್ಯಂತರ ಜನರಿಗೆ ಅನ್ನ, ಅಕ್ಷರ ಮತ್ತು ಆಶ್ರಯ ನೀಡುವ ಮೂಲಕ ಅವುಗಳ ಮಹತ್ವವನ್ನುವಿಶ್ವಕ್ಕೆ ಸಾರಿದ ಬಾಲಗಂಗಾಧರನಾಥ ಸ್ವಾಮೀಜಿ ಹಾಗೂ ಶಿವಕುಮಾರ ಸ್ವಾಮೀಜಿ ಸಮಾಜದ ಎರಡು ಕಣ್ಣುಗಳು ಇದ್ದಂತೆ’ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.</p>.<p>ವಿ.ಸೋಮಣ್ಣ ಪ್ರತಿಷ್ಠಾನದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಬಾಲಗಂಗಾಧರನಾಥ ಸ್ವಾಮಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಬಾಲಗಂಗಾಧರನಾಥ ಸ್ವಾಮೀಜಿ ನನ್ನ ಜೀವನಕ್ಕೆ ಶಕ್ತಿ ತುಂಬಿ, ಇಂದು ಸಚಿವನಾಗಿ ಸಮಾಜ ಸೇವೆ ಮಾಡಲು ಪ್ರೇರಣೆ ನೀಡಿದರು. 29 ವರ್ಷಗಳಿಂದ ಪಾಳು ಬಿದ್ದ ಜಾಗವನ್ನು ಸುಂದರವಾದ ಬಿ.ಜಿ.ಎಸ್.ಕ್ರೀಡಾಂಗಣ ಮಾಡಲು ಅವರ ಆಶೀರ್ವಾದವೇ ಕಾರಣ’ ಎಂದರು.</p>.<p>‘ಅವರ ಮಾರ್ಗದರ್ಶನದಿಂದ ದೀಪಾಂಜಲಿ ನಗರದ ಕೊಳೆಗೇರಿ ಅಭಿವೃದ್ಧಿ, ಬಾಳಯ್ಯನ ಕೆರೆ ಸಂರಕ್ಷಣೆ ಹಾಗೂ 2 ಕೋಟಿ ಸಸಿ ನೆಡುವ ಕಾರ್ಯಗಳು ಯಶಸ್ವಿಯಾದವು’ ಎಂದು ಹೇಳಿದರು.</p>.<p>ಬೇಲಿಮಠದ ಶಿವರುದ್ರ ಸ್ವಾಮೀಜಿ,‘ಗುರುಗಳ ಬಳಿ ಸೇವಾ ಮನೋಭಾವದಿಂದ ಸಮರ್ಪಣೆ ಮಾಡಿದವರಿಗೆ ಅವರ ಸಂಪೂರ್ಣ ಆಶೀರ್ವಾದ ಲಭಿಸುತ್ತದೆ. ನಾನು ಎಂಬುದನ್ನು ಬಿಟ್ಟರೆ ಸಮಾಜದ ಅಭಿವೃದ್ದಿ ಸಾಧ್ಯ’ ಎಂದರು.</p>.<p>ಆದಿಚುಂಚನಗಿರಿ ವಿಜಯನಗರ ಶಾಖಾ ಮಠದ ಸೌಮ್ಯನಾಥ ಸ್ವಾಮೀಜಿ,‘ಸಮಾಜ ಸುಧಾರಣೆ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವಬಾಲಗಂಗಾಧರನಾಥ ಸ್ವಾಮೀಜಿ ಜಾತಿ, ಮತಗಳನ್ನು ನೋಡದೆ ಸಮಾಜಕ್ಕೆ ಸೇವೆ ಸಲ್ಲಿಸಿದವರನ್ನು ಗುರುತಿಸಿ ಪ್ರೋತ್ಸಾಹಿಸುತ್ತಿದ್ದರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>