ಬಲಿಜ ಸಮುದಾಯದ ಬಹುತೇಕರು ಅರಿಸಿನ–ಕುಂಕುಮ, ಬಳೆ, ಹೂವು, ಎಲೆ–ಅಡಿಕೆ ಮಾರಾಟ ರೀತಿಯ ಬೀದಿ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. 2ಎ ಮೀಸಲಾತಿ ನೀಡುವ ಮೂಲಕ ಉದ್ಯೋಗ ಮತ್ತು ರಾಜಕೀಯದಲ್ಲಿ ಮೀಸಲಾತಿ ಸಿಗುವಂತೆ ಮಾಡಬೇಕು. ಈ ಸಮುದಾಯದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಕರ್ನಾಟಕ ಬಲಿಜ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಸಮುದಾಯದ ಮುಖಂಡರನ್ನೇ ನಿಗಮಕ್ಕೆ ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂದು ಒತ್ತಾಯಿಸಿದರು.