ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಯಲ್ಲಿದ್ದು, ಈ ಅವಧಿಯಲ್ಲಿ ಲಸಿಕೆ ಪಡೆಯಲು ತೆರಳುವುದಿದ್ದಲ್ಲಿ ಸೂಕ್ತ ದಾಖಲೆ ಅಗತ್ಯ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಲಸಿಕೆ ಪಡೆಯಲು ಸಂಚರಿಸುತ್ತಿರುವವರ ಬಳಿ ಸೂಕ್ತ ದಾಖಲೆಗಳು ಇದ್ದಲ್ಲಿ ಅನುವು ಮಾಡಿಕೊಡಬೇಕು ಎಂದು ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.
ಒಂದು ವೇಳೆ ಪೊಲೀಸ್ ಕೇಳಿದರೆ ಸಾರ್ವಜನಿಕರು ಲಸಿಕೆ ಪಡೆಯುತ್ತಿರುವುದರ ಕುರಿತ SMS/ರಸೀದಿ/ಆನ್ಲೈನ್ ದಾಖಲೆ ಮುಂತಾದವನ್ನು ತೋರಿಸತಕ್ಕದ್ದು ಎಂದು ತಿಳಿಸಿದ್ದಾರೆ.
ಲಸಿಕೆ ಪಡೆಯಲು ಸಂಚರಿಸುತ್ತಿರುವವರ ಬಳಿ ಸೂಕ್ತ ದಾಖಲೆಗಳು ಇದ್ದಲ್ಲಿ ಅನುವು ಮಾಡಿಕೊಡಬೇಕು ಎಂದು @BlrCityPolice ಪೊಲೀಸ್ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಒಂದು ವೇಳೆ ಪೊಲೀಸ್ ಕೇಳಿದರೆ ಸಾರ್ವಜನಿಕರು ಲಸಿಕೆ ಪಡೆಯುತ್ತಿರುವುದರ ಕುರಿತ SMS/ರಸೀದಿ/ಆನ್ಲೈನ್ ದಾಖಲೆ ಮುಂತಾದವನ್ನು ತೋರಿಸತಕ್ಕದ್ದು.