<p><strong>ಬೆಂಗಳೂರು: </strong>ಶುದ್ಧ ಕುಡಿಯುವ ನೀರಿನ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ವಿಚಾರಣೆ ನಡೆಸಿ, ವರದಿ ನೀಡಲು ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಜಂಟಿ ಸದನ ಸಮಿತಿಯ ಕಾರ್ಯವ್ಯಾಪ್ತಿಯ ಆದೇಶ ಹೊರಡಿಸಲಾಗಿದೆ.</p>.<p>2013ರಿಂದ ಈವರೆಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ಅನುಸರಿಸಿದ ಮಾನದಂಡಗಳು, ಅವುಗಳ ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ ವಿಧಿಸಲಾಗಿರುವ ಷರತ್ತುಗಳು ಮತ್ತು ಅನುಸರಿಸಿರುವ ಕ್ರಮಗಳ ಬಗ್ಗೆ ವಿಚಾರಣೆ ನಡೆಸಲಿದೆ.</p>.<p>ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯಾಚರಣೆ ಮತ್ತು ಅವುಗಳನ್ನು ನಿರ್ವಹಿಸಿರುವ ವಿವಿಧ ಸಂಘ ಸಂಸ್ಥೆಗಳು/ಗುತ್ತಿಗೆದಾರರನ್ನು ಆಯ್ಕೆ ಮಾಡಿರುವ ವಿಧಾನ ಮತ್ತು ಅವುಗಳ ಕಾರ್ಯವೈಖರಿಯ ಕುರಿತು ಪರಾಮರ್ಶೆ ನಡೆಯಲಿದೆ.</p>.<p>ನೀರಿನ ಘಟಕಗಳ ಸ್ಥಾಪನೆ ಮತ್ತು ನಿರ್ವಹಣೆಗೆ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಹಣ ಖರ್ಚಾಗುತ್ತಿರುವ ಬಗ್ಗೆ ಪರಿಶೀಲಿಸುವುದು. ಈಗ ಕಾರ್ಯಾಚರಣೆಯಲ್ಲಿರುವ, ತಾತ್ಕಾಲಿಕ/ ಶಾಶ್ವತವಾಗಿ ಸ್ಥಗಿತಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ವಿವರ, ಸ್ಥಗಿತಗೊಳ್ಳಲು ಕಾರಣವಾಗಿರುವ ಅಂಶಗಳು, ಸುಸ್ಥಿತಿಯಲ್ಲಿಡಲು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸದನ ಸಮಿತಿ ವಿಚಾರಣೆ ನಡೆಸಲಿದೆ. ಪ್ರಜಾವಾಣಿ ಈ ಅಕ್ರಮದ ಕುರಿತು ವಿಶೇಷ ವರದಿ ಪ್ರಕಟಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಶುದ್ಧ ಕುಡಿಯುವ ನೀರಿನ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ವಿಚಾರಣೆ ನಡೆಸಿ, ವರದಿ ನೀಡಲು ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಜಂಟಿ ಸದನ ಸಮಿತಿಯ ಕಾರ್ಯವ್ಯಾಪ್ತಿಯ ಆದೇಶ ಹೊರಡಿಸಲಾಗಿದೆ.</p>.<p>2013ರಿಂದ ಈವರೆಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ಅನುಸರಿಸಿದ ಮಾನದಂಡಗಳು, ಅವುಗಳ ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ ವಿಧಿಸಲಾಗಿರುವ ಷರತ್ತುಗಳು ಮತ್ತು ಅನುಸರಿಸಿರುವ ಕ್ರಮಗಳ ಬಗ್ಗೆ ವಿಚಾರಣೆ ನಡೆಸಲಿದೆ.</p>.<p>ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯಾಚರಣೆ ಮತ್ತು ಅವುಗಳನ್ನು ನಿರ್ವಹಿಸಿರುವ ವಿವಿಧ ಸಂಘ ಸಂಸ್ಥೆಗಳು/ಗುತ್ತಿಗೆದಾರರನ್ನು ಆಯ್ಕೆ ಮಾಡಿರುವ ವಿಧಾನ ಮತ್ತು ಅವುಗಳ ಕಾರ್ಯವೈಖರಿಯ ಕುರಿತು ಪರಾಮರ್ಶೆ ನಡೆಯಲಿದೆ.</p>.<p>ನೀರಿನ ಘಟಕಗಳ ಸ್ಥಾಪನೆ ಮತ್ತು ನಿರ್ವಹಣೆಗೆ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಹಣ ಖರ್ಚಾಗುತ್ತಿರುವ ಬಗ್ಗೆ ಪರಿಶೀಲಿಸುವುದು. ಈಗ ಕಾರ್ಯಾಚರಣೆಯಲ್ಲಿರುವ, ತಾತ್ಕಾಲಿಕ/ ಶಾಶ್ವತವಾಗಿ ಸ್ಥಗಿತಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ವಿವರ, ಸ್ಥಗಿತಗೊಳ್ಳಲು ಕಾರಣವಾಗಿರುವ ಅಂಶಗಳು, ಸುಸ್ಥಿತಿಯಲ್ಲಿಡಲು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸದನ ಸಮಿತಿ ವಿಚಾರಣೆ ನಡೆಸಲಿದೆ. ಪ್ರಜಾವಾಣಿ ಈ ಅಕ್ರಮದ ಕುರಿತು ವಿಶೇಷ ವರದಿ ಪ್ರಕಟಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>