‘ಸುಧಾಮನಗರದ ಚಹಾ ಅಂಗಡಿಯೊಂದರ ಮುಂದೆ ಆರೋಪಿಗಳು ನಿಂತುಕೊಂಡಿದ್ದರು. ಸ್ಥಳಕ್ಕೆ ಹೋಗಿದ್ದ ಸೂರ್ಯ, ಯುವತಿಯ ಮೊಬೈಲ್ ಕೊಡುವಂತೆ ಒತ್ತಾಯಿಸಿದ್ದರು. ಅದಕ್ಕೆ ಒಪ್ಪದ ಆರೋಪಿಗಳು, ಸೂರ್ಯ ಜೊತೆ ಜಗಳ ತೆಗೆದು ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ತೀವ್ರ ಗಾಯಗೊಂಡ ಸೂರ್ಯ ಅವರನ್ನು ಯುವತಿಯೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು. ನಂತರ, ಕೃತ್ಯದ ಬಗ್ಗೆ ಯುವತಿ ಠಾಣೆಗೆ ದೂರು ನೀಡಿದ್ದರು’ ಎಂದು ತಿಳಿಸಿದರು.