ಶುಕ್ರವಾರ, ಮಾರ್ಚ್ 31, 2023
25 °C

ಬೆಂಗಳೂರು– ಮೈಸೂರು ದಶಪಥ ಇದೀಗ ಬೋಟ್ ಪಥ: ಕಾಂಗ್ರೆಸ್ ಟೀಕೆ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು– ಮೈಸೂರು ದಶಪಥ ಹೆದ್ದಾರಿ ಯೋಜನೆಯು ಇದೀಗ, ಒಂದೇ ಮಳೆಗೆ ಏಕಪಥ ರಸ್ತೆಯಾಗಿದೆ. ಇನ್ನೆರಡು ಬೋಟ್ ಪಥವಾಗಿ ಮಾರ್ಪಟ್ಟಿವೆ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.

ಬೆಂಗಳೂರು– ಮೈಸೂರು ದಶಪಥ ಹೆದ್ದಾರಿ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಬಿಜೆಪಿ ಸರ್ಕಾರದವರ ಮುಂದಾಲೋಚನೆಯಿಂದ ಈ ಜಲಸಾರಿಗೆ ಮಾರ್ಗಗಳನ್ನೂ ನಿರ್ಮಿಸಿದ್ದಾರೆ. ಶೀಘ್ರದಲ್ಲಿಯೇ ಪ್ರಧಾನಿ ನರೇಂದ್ರ ಮೋದಿಯವರು ಬೋಟ್ ಪ್ರಯಾಣ ಮಾಡಿ ಉದ್ಘಾಟಿಸಲಿದ್ದಾರೆ ಎಂದು ಟೀಕಿಸಿದೆ.

‘ದಶಪಥ ಯೋಜನೆಯು ಮೋದಿಯವರ ಮೇಲುಸ್ತುವಾರಿಯಲ್ಲಿ ಹಾಗೂ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಖುದ್ದಾಗಿ ಆಸಕ್ತಿ ವಹಿಸಿ ಕಾರ್ಯನಿರ್ವಹಿಸಿದ ಅಭಿವೃದ್ಧಿ ಯೋಜನೆ ಇದಾಗಿದೆ.

 

ಇವನ್ನೂ ಓದಿ: 

                 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು