<p><strong>ಬೆಂಗಳೂರು:</strong> ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು 2022ರ ಡಿಸೆಂಬರ್ಗೆ ಪೂರ್ಣಗೊಳ್ಳಲಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಬುಧವಾರ ವಿಧಾನ ಪರಿಷತ್ನಲ್ಲಿ ತಿಳಿಸಿದರು.</p>.<p>ಜೆಡಿಎಸ್ನ ಮರಿತಿಬ್ಬೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ದಶಪಥವನ್ನಾಗಿ ಮಾಡುವ ಈ ಹೆದ್ದಾರಿ ಕಾಮಗಾರಿಯನ್ನು ಎರಡು ಪ್ಯಾಕೇಜ್ಗಳಲ್ಲಿ ಕೈಗೊಳ್ಳಲಾಗಿದೆ. 56.20 ಕಿ.ಮೀ. ಉದ್ದದ ಬೆಂಗಳೂರಿನಿಂದ ನಿಡಘಟ್ಟದವರೆಗೆ ಒಂದನೇ ಪ್ಯಾಕೇಜ್ ಮತ್ತು 61.104 ಕಿ.ಮೀ. ಉದ್ದದ ನಿಡಘಟ್ಟದಿಂದ ಮೈಸೂರಿನವರೆಗೆ ಇನ್ನೊಂದು ಪ್ಯಾಕೇಜ್ ಮಾಡಲಾಗಿದೆ’ ಎಂದುವಿವರಿಸಿದರು.</p>.<p>ಬೆಂಗಳೂರಿನಿಂದ ನಿಡಘಟ್ಟದವರೆಗಿನ ಕಾಮಗಾರಿಗೆ ₹2190 ಕೋಟಿ ಮೊತ್ತಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ, ಸಿವಿಲ್ ಕಾಮಗಾರಿಗೆ ₹875.90 ಕೋಟಿ ಮತ್ತು ಭೂಸ್ವಾಧೀನಕ್ಕೆ ₹2018.75 ಕೋಟಿ ವೆಚ್ಚವಾಗಿದೆ. 2022ರ ಮೇ 2ರ ಒಳಗೆ ಈ ಕಾಮಗಾರಿ ಮುಕ್ತಾಯಗೊಳಿಸುವಂತೆ ಸೂಚಿಸಲಾಗಿತ್ತು ಎಂದು ಸಚಿವರು ವಿವರಿಸಿದರು.</p>.<p>ನಿಡಘಟ್ಟದಿಂದ ಮೈಸೂರುವರೆಗಿನ ಕಾಮಗಾರಿಗೆ ₹2283 ಕೋಟಿ ಮೊತ್ತಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ, ಸಿವಿಲ್ ಕಾಮಗಾರಿಗೆ ₹882.66 ಕೋಟಿ ಮತ್ತು ಭೂಸ್ವಾಧೀನಕ್ಕೆ ₹1278.13 ಕೋಟಿ ವೆಚ್ಚವಾಗಿದೆ. ಈ ಕಾಮಗಾರಿಯನ್ನು ಸಹ 2022ರ ಸೆಪ್ಟೆಂಬರ್ 7ಕ್ಕೆ ಮುಕ್ತಾಗೊಳಿಸುವಂತೆ ಗಡುವು ನೀಡಲಾಗಿತ್ತು. ಆದರೆ, ಕೋವಿಡ್ ಮತ್ತುಭೂಸ್ವಾಧೀನ ಕಾರಣಗಳಿಂದ ಪ್ರಸಕ್ತ ವರ್ಷ ಡಿಸೆಂಬರ್ ಅಂತ್ಯದ ಒಳಗೆ ಈ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ವಿವರಿಸಿದರು.</p>.<p>ಕೆಳಸೇತುವೆ ಮತ್ತು ಸರ್ವಿಸ್ ರಸ್ತೆಗಳ ಗುಣಮಟ್ಟ ಕಾಪಾಡಲು ಸಮಿತಿ ರಚಿಸಲಾಗುವುದು ಎಂದುತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು 2022ರ ಡಿಸೆಂಬರ್ಗೆ ಪೂರ್ಣಗೊಳ್ಳಲಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಬುಧವಾರ ವಿಧಾನ ಪರಿಷತ್ನಲ್ಲಿ ತಿಳಿಸಿದರು.</p>.<p>ಜೆಡಿಎಸ್ನ ಮರಿತಿಬ್ಬೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ದಶಪಥವನ್ನಾಗಿ ಮಾಡುವ ಈ ಹೆದ್ದಾರಿ ಕಾಮಗಾರಿಯನ್ನು ಎರಡು ಪ್ಯಾಕೇಜ್ಗಳಲ್ಲಿ ಕೈಗೊಳ್ಳಲಾಗಿದೆ. 56.20 ಕಿ.ಮೀ. ಉದ್ದದ ಬೆಂಗಳೂರಿನಿಂದ ನಿಡಘಟ್ಟದವರೆಗೆ ಒಂದನೇ ಪ್ಯಾಕೇಜ್ ಮತ್ತು 61.104 ಕಿ.ಮೀ. ಉದ್ದದ ನಿಡಘಟ್ಟದಿಂದ ಮೈಸೂರಿನವರೆಗೆ ಇನ್ನೊಂದು ಪ್ಯಾಕೇಜ್ ಮಾಡಲಾಗಿದೆ’ ಎಂದುವಿವರಿಸಿದರು.</p>.<p>ಬೆಂಗಳೂರಿನಿಂದ ನಿಡಘಟ್ಟದವರೆಗಿನ ಕಾಮಗಾರಿಗೆ ₹2190 ಕೋಟಿ ಮೊತ್ತಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ, ಸಿವಿಲ್ ಕಾಮಗಾರಿಗೆ ₹875.90 ಕೋಟಿ ಮತ್ತು ಭೂಸ್ವಾಧೀನಕ್ಕೆ ₹2018.75 ಕೋಟಿ ವೆಚ್ಚವಾಗಿದೆ. 2022ರ ಮೇ 2ರ ಒಳಗೆ ಈ ಕಾಮಗಾರಿ ಮುಕ್ತಾಯಗೊಳಿಸುವಂತೆ ಸೂಚಿಸಲಾಗಿತ್ತು ಎಂದು ಸಚಿವರು ವಿವರಿಸಿದರು.</p>.<p>ನಿಡಘಟ್ಟದಿಂದ ಮೈಸೂರುವರೆಗಿನ ಕಾಮಗಾರಿಗೆ ₹2283 ಕೋಟಿ ಮೊತ್ತಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ, ಸಿವಿಲ್ ಕಾಮಗಾರಿಗೆ ₹882.66 ಕೋಟಿ ಮತ್ತು ಭೂಸ್ವಾಧೀನಕ್ಕೆ ₹1278.13 ಕೋಟಿ ವೆಚ್ಚವಾಗಿದೆ. ಈ ಕಾಮಗಾರಿಯನ್ನು ಸಹ 2022ರ ಸೆಪ್ಟೆಂಬರ್ 7ಕ್ಕೆ ಮುಕ್ತಾಗೊಳಿಸುವಂತೆ ಗಡುವು ನೀಡಲಾಗಿತ್ತು. ಆದರೆ, ಕೋವಿಡ್ ಮತ್ತುಭೂಸ್ವಾಧೀನ ಕಾರಣಗಳಿಂದ ಪ್ರಸಕ್ತ ವರ್ಷ ಡಿಸೆಂಬರ್ ಅಂತ್ಯದ ಒಳಗೆ ಈ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ವಿವರಿಸಿದರು.</p>.<p>ಕೆಳಸೇತುವೆ ಮತ್ತು ಸರ್ವಿಸ್ ರಸ್ತೆಗಳ ಗುಣಮಟ್ಟ ಕಾಪಾಡಲು ಸಮಿತಿ ರಚಿಸಲಾಗುವುದು ಎಂದುತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>